ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಥಣಿಯಲ್ಲಿ ಶಾಸಕರಾದ ಲಕ್ಷ್ಮಣ ಸವದಿ ಅವರಿಂದ ಅಭಿಯಂತರರ ದಿನಾಚರಣೆ ಉದ್ಘಾಟನೆ

ಬೆಳಗಾವಿ :ದಿನಾಂಕ 19/09/2025 ರಂದು ಅಥಣಿ ನಗರದ ಸತ್ತಿ ರಸ್ತೆಯಲ್ಲಿರುವ ರಾಯಲ್ ಹಾಲ್’ನಲ್ಲಿ ನಡೆದ ಅಥಣಿ ತಾಲೂಕಾ ಅಭಿಯಂತರ ಹಾಗೂ ಗುತ್ತಿಗೆದಾರರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಅಭಿಯಂತರರ ದಿನಾಚರಣೆ ಸಮಾರಂಭವನ್ನು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ಸರ್ ಎಂ ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪೂಜೆ ಮಾಡುವುದರ ಮೂಲಕ ಹಾಗೂ ಸಸಿಗೆ ನೀರು ಹಾಕುವುದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದೇ ಕಾರ್ಯಕ್ರಮದಲ್ಲಿ ಶಾಸಕರಾದ ಲಕ್ಷ್ಮಣ ಸವದಿ ಅವರಿಗೆ ಅಭಿಯಂತರರು ಹಾಗೂ ಗುತ್ತಿಗೆದಾರರಿಂದ ಸತ್ಕಾರ ಮಾಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಡಾ|| ಅನಿಕೇತ ಕತವಾರೆ ಸಹಾಯಕ ಉಪನ್ಯಾಸಕರು ಧಾರವಾಡ, ಶ್ರೀ ನಾಗರಾಜ ಬಿ,ಎ,ಅಧೀಕ್ಷಕ ಅಭಿಯಂತರರು, ಶ್ರೀ ರಾಜೇಶ ಟೋಪಗಿ, ಅಭಿಯಂತರರು, ಶ್ರೀ ಪ್ರವೀಣ ಹುಣಸೀಕಟ್ಟಿ ಕಾರ್ಯನಿರ್ವಾಹಕ ಅಭಿಯಂತರರು ಅಥಣಿ, ಶ್ರೀ ರಾಜೇಶ ಆಲಬಾಳ ಗುತ್ತಿಗೆದಾರರು,ಶ್ರೀ ಶ್ರೀಧರ ಚವ್ಹಾಣ, ಅಭಿಯಂತರರಾದ ಸತೀಶ್ ಹಿರೇಮನಿ, ಹಾಗೂ ಇನ್ನೂ ಅನೇಕ ಅಭಿಯಂತರರು ಹಾಗೂ ಗುತ್ತಿಗೆದಾರರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಅದಲ್ಲದೆ ಹಿರಿಯ ಮುಖಂಡರು ಮತ್ತು ಗುತ್ತಿಗೆದಾರರ ಸಂಘದ ಸದಸ್ಯರು ಉಪಸ್ಥಿತರಿದ್ದರು.

ವರದಿ. ವಿಠ್ಠಲ ಖೋಕಾಟೆ, ಅಥಣಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!