ಚಾಮರಾಜನಗರ/ ಹನೂರು: ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ವಾಲ್ಮೀಕಿ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಯಿತು.
ಈ ಸಭೆಯ ಅಧ್ಯಕ್ಷತೆಯನ್ನು ಶಾಸಕ ಎಂ.ಆರ್. ಮಂಜುನಾಥ್ ವಹಿಸಿದ್ದರು.
ಸಭೆಯಲ್ಲಿ ಸ್ಥಳೀಯ ಮುಖಂಡರು ಮಾತನಾಡಿ, ಈ ಬಾರಿ ಹನೂರಿನಲ್ಲಿ ವಾಲ್ಮೀಕಿ ಜಯಂತಿಯನ್ನು ಹೆಚ್ಚು ಅದ್ದೂರಿಯಾಗಿ, ತಾಲೂಕು ಮಟ್ಟದಲ್ಲಿ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಆಚರಿಸಬೇಕೆಂಬ ಬೇಡಿಕೆಯನ್ನು ಮಂಡಿಸಿದರು. ಇದೇ ವೇಳೆ, ಅಗತ್ಯ ಸಹಕಾರ ನೀಡಲು ಅವರು ಶಾಸಕರ ಗಮನ ಸೆಳೆದರು.
ಬಳಿಕ ಮಾತನಾಡಿ ಶಾಸಕರು ವಾಲ್ಮೀಕಿ ಮಹರ್ಷಿಯವರ ಜೀವನ ಸಂದೇಶಗಳು ಇಂದು ಸಮಾಜಕ್ಕೆ ಮಾರ್ಗದರ್ಶಕವಾಗಿವೆ. ಈ ಆಚರಣೆಯನ್ನು ಸಾಂಸ್ಕೃತಿಕ, ಧಾರ್ಮಿಕ ಹಾಗೂ ಶಿಸ್ತುಬದ್ಧ ರೀತಿಯಲ್ಲಿ ಆಚರಿಸಲು ಹಮ್ಮಿಕೊಳ್ಳಲಾಗುಗಮವುದು ಎಲ್ಲಾ ಇಲಾಖೆಗಳ
ಸಹಕಾರದೊಂದಿಗೆ ನಡೆಯುವಂತೆ ಕ್ರಮ ಕೈಗೊಳ್ಳಲಾಗುತ್ತದೆ ” ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮಮ್ತಾಜ್ ಬಾನು, ತಾಲೂಕು ದಂಡಾಧಿಕಾರಿ ಚೈತ್ರಾ, ಇಓ ಉಮೇಶ್, ತಾಲೂಕು ಅಲ್ಪಸಂಖ್ಯಾತರ ಕಲ್ಯಾಣಧಿಕಾರಿ ರಾಜೇಶ್, ಚೆಸ್ಕಾಂ ಎಇಇ ರಂಗಸ್ವಾಮಿ, ಕುಡಿರುವ ನೀರಿನ ನೈರ್ಮಲ್ಯ ಇಲಾಖೆಯ ಎಇಇ ಸುಧನ್ವನಾಗ್, ತಾಲೂಕು ಆರೋಗ್ಯಾಧಿಕಾರಿ ಪ್ರಕಾಶ್,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಅಂಬಿಕಾ,ತಾಲೂಕು ನಾಯಕ ಸಮುದಾಯದ ಅಧ್ಯಕ್ಷರಾದ ಪುಟ್ಟವಿರನಾಯಕ,ಪ್ರಧಾನ ಕಾರ್ಯದರ್ಶಿ ರಾಚಪ್ಪ, ಉಪಾಧ್ಯಕ್ಷರಾದ ವೆಂಕಟಮಾದು ಸೇರಿದಂತೆ ತಾಲೂಕಿನ ಮುಖಂಡರುಗಳು ಇದ್ದರು.
ವರದಿ ಉಸ್ಮಾನ್ ಖಾನ್




















