ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ಕಾವಲು ಪಡೆ ವತಿಯಿಂದ ಮನವಿ ಪತ್ರ ಸಲ್ಲಿಕೆ

ಚಾಮರಾಜನಗರ :ಗುಂಡ್ಲುಪೇಟೆ ಪಟ್ಟಣವು ನಮ್ಮ ಕರ್ನಾಟಕ ರಾಜ್ಯದ ಗಡಿ ಭಾಗವಾಗಿದ್ದು ಗಡಿ ಭಾಗದಲ್ಲಿ ನೆರೆ ರಾಜ್ಯವಾದ ತಮಿಳುನಾಡು ಹಾಗೂ ಕೇರಳಕ್ಕೆ ಹಲವಾರು ಪ್ರವಾಸಿಗರು ಹಾದು ಹೋಗುವ ತಾಣವಾಗಿದ್ದರಿಂದ ರಾಷ್ಟ್ರೀಯ ಹೆದ್ದಾರಿಯ ಮಧ್ಯ ಭಾಗದಲ್ಲಿರುವ ವಿದ್ಯುತ್ ಕಂಬಗಳಿಗೆ ಕೆಂಪು ಮತ್ತು ಹಳದಿ ಬಣ್ಣವನ್ನು ಹೊಡಿಸುವುದರಿಂದ ಕನ್ನಡದ ಗೌರವ ಹೆಚ್ಚಾದಂತೆ ಆಗುತ್ತದೆ. ಆದ್ದರಿಂದ ಪುರಸಭೆ ಇಲಾಖೆಯ ವತಿಯಿಂದ ತಾವುಗಳು ಇದರ ಬಗ್ಗೆ ಶೀಘ್ರ ಗಮನ ಹರಿಸಬೇಕೆಂದು ಸಂಘಟನೆ ವತಿಯಿಂದ ಪುರಸಭೆ ಮುಖ್ಯಾಧಿಕಾರಿಗಳಾದ ಶರವಣರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್ ಮಾತನಾಡಿ ಮೈಸೂರು ಊಟಿ ಮುಖ್ಯ ರಸ್ತೆ ಹಾಗೂ ಸುಲ್ತಾನ್ ಬತ್ತೇರಿ ರಸ್ತೆ ಮತ್ತು ಚಾಮರಾಜನಗರ ರಸ್ತೆ ಸೇರಿದಂತೆ ಸುಮಾರು 87ವಿದ್ಯುತ್ ಕಂಬಗಳಿರುವುದರಿಂದ ಇದಕ್ಕೆ ಕೆಂಪು ಹಳದಿ ಬಣ್ಣದಿಂದ ಕೂಡಿದರೆ ಪಟ್ಟಣದ ಸೌಂದರ್ಯ ಹೆಚ್ಚುತ್ತದೆ ಎಂದು ತಿಳಿಸಿದರು. ಇದೇ ವೇಳೆ ತಾಲ್ಲೂಕು ಗೌರವಾಧ್ಯಕ್ಷರಾದ ರಾಮೇಗೌಡ, ಸಲಹೆಗಾರರಾದ ಎಸ್.ಮುಬಾರಕ್, ಟೌನ್ ಉಪಾಧ್ಯಕ್ಷರಾದ ಸಾದಿಕ್ ಪಾಷ, ಟೌನ್ ಗೌರವಾಧ್ಯಕ್ಷರಾದ ಶಕೀಲ್, ಸಂಚಾಲಕರಾದ ಮಿಮುಕ್ರಿರಾಜು, ಡ್ಯಾನ್ಸರ್ ಪವನ್, ಕನ್ನಡಪರ ಹಿರಿಯ ಹೋರಾಟಗಾರರಾದ ಬ್ರಹ್ಮಾನಂದ್, ಕರ್ನಾಟಕ ಗಡಿನಾಡು ಪರಿಸರ ಸಂರಕ್ಷಣಾ ಸಂಘದ ತಾಲ್ಲೂಕು ಅಧ್ಯಕ್ಷರಾದ ಪಿ.ಬಾಲು, ಭೀಮನಬೀಡು ರಫೀಕ್ ಸೇರಿದಂತೆ ಇತರರು ಹಾಜರಿದ್ದರು.

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!