ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯ ಬನ್ನಿ ಮಹಾಂಕಾಳಿ ದೇವಾಲಯದಲ್ಲಿ ಘಟಸ್ಥಾಪನೆ ಮತ್ತು ಪೂರ್ಣಕುಂಭ ಮೆರವಣಿಗೆ

ಬಳ್ಳಾರಿ / ಕಂಪ್ಲಿ : ಪಟ್ಟಣದ 16ನೇ ವಾರ್ಡಿನ ವಿನಾಯಕ ನಗರದ ಇಂದಿರಾ ನಗರದಲ್ಲಿರುವ ಬನ್ನಿ ಮಹಾಂಕಾಳಿ ದೇವಸ್ಥಾನದಲ್ಲಿ ದಸರಾ ಹಬ್ಬದ ಪ್ರಯುಕ್ತ ಘಟಸ್ಥಾಪನೆ ಅಂಗವಾಗಿ ಸುಮಂಗಲೆಯರಿಂದ ಕಳಸ, ಪೂರ್ಣ ಕುಂಭ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.
ಪಟ್ಟಣದ ಪೇಟೆ ಬಸವೇಶ್ವರ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಾಗಿ ದೇವಸ್ಥಾನದಲ್ಲಿ ಸಮಾವೇಶಗೊಂಡಿತು. 101 ಕಳಸ, ಪೂರ್ಣಕುಂಭ ಸೇರಿದಂತೆ ವಿವಿಧ ಮಂಗಳವಾದ್ಯ ಮೆರವಣಿಗೆಗೆ ಮೆರಗು ನೀಡಿದ್ದವು. ಶರನ್ನವರಾತ್ರಿ ದಸರಾ ಹಬ್ಬದ ಆಂಗವಾಗಿ ದೇವಸ್ಥಾನದಲ್ಲಿ ಸಕಲ ಸದ್ಭಕ್ತರ ಸಮ್ಮುಖದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ದಸರಾ ಹಬ್ಬದ ಆಂಗವಾಗಿ ಬನ್ನಿ ಮಹಾಂಕಾಳಿ ದೇವಸ್ಥಾನದಲ್ಲಿ ಪ್ರತಿದಿನ ಬೆಳಿಗ್ಗೆ ದೇವಿಗೆ ಪಂಚಾಮ್ರುತ ಆಭಿಷೇಕ, ಕುಂಕುಮಾರ್ಚನೆ ನಡೆಯಲಿದ್ದು, ಸಂಜೆ ಲಲಿತ ಸಹಸ್ರನಾಮ ಪಠಣೆ, ಕುಂಕುಮಾರ್ಚನೆ ಮತ್ತು ಪಲ್ಲಕ್ಕಿ ಸೇವೆಗಳು ನಡೆಯಲಿವೆ. 9 ದಿನಗಳ ಕಾಲ ದೇವಿಗೆ ವಿವಿಧ ದೇವತೆಯರ ಅಲಂಕಾರ ಮಾಡಿ ಪೂಜಿಸಲಿದ್ದಾರೆ. ಸೆ.29ರಂದು ದುರ್ಗಾಷ್ಠಮಿ ಪ್ರಯುಕ್ತವಾಗಿ ಬೆಳಿಗ್ಗೆ ಚಂಡಿ ಹೋಮ, ಪೂರ್ಣಾಹುತಿ, ಅನ್ನಸಂತರ್ಪಣೆ ನಡೆಯಲಿದೆ. ಅ.2ರಂದು ಸಂಜೆ 5ಗಂಟೆಗೆ ಬನ್ನಿಮಹಾಂಕಾಳಿ ದೇವಿಯ ಮಹಾರಥೋತ್ಸವವು ವಿಜೃಂಭಣೆಯಿಂದ ಜರುಗಲಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!