ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪುರಸಭೆಯಲ್ಲಿ ಪೌರ ಕಾರ್ಮಿಕರ ದಿನಾಚರಣೆ

ಸಮಾಜದ ನೈರ್ಮಲ್ಯವನ್ನು ಕಾಪಾಡಲು ನಿರಂತರವಾಗಿ ಶ್ರಮಿಸುವ ಪೌರ ಕಾರ್ಮಿಕರ ಸೇವೆ ಶ್ಲಾಘನೀಯ – ಭಾರತಿ ದಂಡೋತಿ.

ಗುರುಮಠಕಲ್: ಸೆ. 23 ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಬಿ ಬಸಲಿಂಗಪ್ಪ ಮಾಜಿ ಪೌರಕಾರ್ಮಿಕ ಸಚಿವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಸಿಗೆ ನೀರೆರಿಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪುರಸಭೆ ಮುಖ್ಯಾಧಿಕಾರಿಗಳಾದ ಶ್ರೀಮತಿ ಭಾರತಿ ದಂಡೋತಿ ಪಟ್ಟಣದ ಸ್ವಚ್ಛತೆಗೆ ಪೌರಕಾರ್ಮಿಕರ ಪಾತ್ರ ಬಹು ಮುಖ್ಯವಾಗಿದೆ, ನಮ್ಮ ಸಮಾಜದಲ್ಲಿ ವೈಯಕ್ತಿಕ ಘನತೆಯಿಂದ ಅಪಾರವಾಗಿ ವಂಚಿತಗೊಂಡಿರುವ ಒಂದು ಸಮೂಹ ಪೌರ ಕಾರ್ಮಿಕರದ್ದು. ಪಟ್ಟಣವನ್ನು ಶುಚಿಗೊಳಿಸುವ ಮೂಲಕ ಇಡೀ ಸಮಾಜವನ್ನು ಆರೋಗ್ಯವಾಗಿ ಇಡುವುದಕ್ಕೆ ಪ್ರತ್ಯಕ್ಷ ಕಾರಣಕರ್ತರು ಪೌರ ಕಾರ್ಮಿಕರು ಎಂದು ಹೇಳಿದರು.

ಸಂತೋಷ ನೀರೆಟಿ ಪೌರ ಕಾರ್ಮಿಕರ ಕಾರ್ಯ ಕುರಿತಾಗಿ ಸ್ವ ರಚಿತ ಕನ್ನಡ ತೆಲುಗು ಮಿಶ್ರಿತ ಕವನ ಹಾಡಿ ಪೌರ ಕಾರ್ಮಿಕರ ಮೆಚ್ಚುಗೆಗೆ ಪಾತ್ರರಾದರು.

ಪುರಸಭೆ ಕಾರ್ಯಾಲಯದ ಒಟ್ಟು 44 ಜನ ಪೌರಕಾರ್ಮಿಕರಿಗೆ ಪುರಸಭೆ ವತಿಯಿಂದ ಸನ್ಮಾನಿಸಿ ಕಾಣಿಕೆ ನೀಡಿ ಸತ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಜಯಶ್ರೀ ಪೊಲೀಸ್ ಪಾಟೀಲ, ಉಪಾಧ್ಯಕ್ಷೆ ರೇಣುಕಾ ಪಡಿಗೆ, ಪುರಸಭೆ ಸದಸ್ಯರು, ನಾಮ ನಿರ್ದೇಶಕ ಸದಸ್ಯರು, ಪುರಸಭೆ ಕಾರ್ಯಾಲಯದ ಸಿಬ್ಬಂದಿ ಭಾಗವಹಿಸಿದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!