
ವಿಜಯದಶಮಿ ಪ್ರಯುಕ್ತ ಪಟ್ಟಣದ ಅಂಬಾ ಭವಾನಿ ದೇವಸ್ಥಾನ ವತಿಯಿಂದ ಶೋಭಾಯಾತ್ರೆ ನಡೆಯಿತು.
ಗುರುಮಠಕಲ್ : ಅ.2 ನಾಡಹಬ್ಬ ದಸರಾದ ಸಂಭ್ರಮ ಪ್ರಯುಕ್ತ ಪಟ್ಟಣದಲ್ಲಿ ಶೋಭಾಯಾತ್ರೆ ಅದ್ಧೂರಿಯಾಗಿ ಜರುಗಿತು, ಸಾಕಷ್ಟು ಯುವಕರು ಜಮಾವಣೆಯೊಂದಿಗೆ ಡಿಜೆ ಸದ್ದಿಗೆ ಯುವಕರು ಕುಣಿದು ಕುಪ್ಪಳಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷ ಕೂಡ ವಿಜಯದಶಮಿ ಪ್ರಯುಕ್ತ ನಾರಾಯಣಪುರ ಬಡಾವಣೆಯ ಅಂಬಾ ಭವಾನಿ ದೇವಸ್ಥಾನದ ಸಮಿತಿ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ಪ್ರಮುಖ ರಸ್ತೆಗಳ ಮುಖಾಂತರ ಸಾಗುವ ಈ ಶೋಭಾಯಾತ್ರೆಯಲ್ಲಿ ಎಲ್ಲಾ ಸಮಾಜದವರು ಭಾಗವಹಿಸಿ ಶೋಭಾಯಾತ್ರೆಗೆ ವಿಶೇಷವಾಗಿ ಮೆರುಗು ನೀಡಿದ್ದಾರೆ.
ವರದಿ: ಜಗದೀಶ್ ಕುಮಾರ್ ಭೂಮಾ



















