ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಿರಿಯ ನಾಗರಿಕರಿಗೆ ಫಿಟ್ನೆಸ್ ಶಿಬಿರ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ಶ್ರೀ ತೇಜಸ್ವಿ ಸೂರ್ಯ ಅವರು ಇಂದು ಬೆಳಿಗ್ಗೆ ಬನಶಂಕರಿ 2ನೇ ಹಂತದ ಬೃಂದಾವನ ಉದ್ಯಾನವನದಲ್ಲಿ ಹಿರಿಯ ನಾಗರಿಕರಿಗಾಗಿ ಫಿಟ್ನೆಸ್ ಶಿಬಿರಕ್ಕೆ ಚಾಲನೆ ಮಾತನಾಡಿದರು.

ಪ್ರಾಣ್ ಹೆಲ್ತ್ ಸಹಯೋಗದೊಂದಿಗೆ ನಡೆಸಲಾಗುತ್ತಿರುವ ಈ ಶಿಬಿರದ ಮೂಲಕ ನಾವು ಹಿರಿಯ ನಾಗರಿಕರಿಗೆ, ಸಮತೋಲನ ಆಹಾರ, ಫಿಸಿಯೋಥೆರಪಿ ಮತ್ತು ಪೋಷಣೆ ಕುರಿತು ವೈಜ್ಞಾನಿಕ ವಿಧಾನಗಳ ಮೂಲಕ ತರಬೇತಿ ನೀಡುತ್ತಿದ್ದು, ಈ ತರಬೇತಿಗಳು ದೈಹಿಕ , ಮಾನಸಿಕ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ವಿನ್ಯಾಸಗೊಳಿಸಲಾಗಿದೆ ಎಂದು ಅವರು ವಿವರಿಸಿದರು.

ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರ “ಫಿಟ್ ಇಂಡಿಯಾ” ಅಭಿಯಾನಕ್ಕೆ ಪೂರಕವಾಗಿ ಇವುಗಳನ್ನು ಯೋಜಿಸಲಾಗಿದ್ದು ಉದ್ಘಾಟನಾ ಸಂದರ್ಭದಲ್ಲಿ ಅನೇಕ ಹಿರಿಯ ನಾಗರಿಕರು ಉತ್ಸಾಹದಿಂದ ಭಾಗವಹಿಸಿದ್ದು ನಮಗೆ ಸಂತಸ ತಂದಿದೆ ಎಂದು ಅವರು ಹಿರಿಯ ನಾಗರಿಕರ ಆಸಕ್ತಿಕರ ಬೆಳವಣಿಗೆಯನ್ನು ಶ್ಲಾಘಿಸಿದರು.

ಬೆಂಗಳೂರು ದಕ್ಷಿಣದ ವಿವಿಧೆಡೆಗಳಲ್ಲಿ ಈ ರೀತಿಯ ಶಿಬಿರಗಳನ್ನು ಆಯೋಜಿಸುವ ಅಭಿಲಾಷೆ ನಮ್ಮದಾಗಿದೆ ಎಂದು ಶ್ರೀ ತೇಜಸ್ವಿ ಸೂರ್ಯ ಅವರು ತಮ್ಮ ಮನದಾಳವನ್ನು ವ್ಯಕ್ತ ಪಡಿಸಿದರು.

ವರದಿ: ಕೊಡಕ್ಕಲ್ ಶಿವಪ್ರಸಾದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!