ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇಲಾಖೆಯ ಹೊರ ಗುತ್ತಿಗೆ ನೌಕರರ ಸಮಸ್ಯೆಗಳನ್ನು ಆಲಿಸಿ, ಈಡೇರಿಸಲಾಗುವುದು :ಡಿ.ಆರ್. ಪಾಂಡುರಂಗ

ಬಳ್ಳಾರಿ / ಕಂಪ್ಲಿ : ಆರೋಗ್ಯ, ಶಿಕ್ಷಣ, ನೀರಾವರಿ ಸೇರಿದಂತೆ ಸುಮಾರು 19 ಇಲಾಖೆಯ ಹೊರ ಗುತ್ತಿಗೆ ನೌಕರರ ಸಮಸ್ಯೆಗಳನ್ನು ಆಲಿಸಿ, ಹೋರಾಟದ ಮೂಲಕ ಸಮಸ್ಯೆಗಳಿಗೆ ಇತಿ ಶ್ರೀ ಹಾಡಲಾಗುವುದು ಎಂದು ಸರ್ಕಾರಿ ಹೊರ ಗುತ್ತಿಗೆ ನೌಕರರ ಕಂಪ್ಲಿ ತಾಲೂಕಾಧ್ಯಕ್ಷ ಡಿ. ಆರ್. ಪಾಂಡುರಂಗ ಹೇಳಿದರು.
ಪಟ್ಟಣದ ಕೊಟ್ಟಾಲ್ ರಸ್ತೆಯ ಜಿಲ್ಲಾ ಕೃಷಿ ತರಬೇತಿ ಕೇಂದ್ರಕ್ಕೆ ತೆರಳುವ ಬಳಿಯಲ್ಲಿರುವ ಸಾಯಿಬಾಬಾ ಉದ್ಯಾನವನದಲ್ಲಿ ಹೊರ ಗುತ್ತಿಗೆ ನೌಕರರಿಂದ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿ, ಇತ್ತೀಚಿನ ದಿನಮಾನದಲ್ಲಿ ನೌಕರರ ಸಮಸ್ಯೆಗಳಿಗೆ ಪರಿಹಾರ ಇಲ್ಲದಂತಾಗಿದೆ. ಇದರಿಂದ ಎಲ್ಲಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರ ಸಮಸ್ಯೆಗಳನ್ನು ಪರಿಗಣಿಸಿ, ಹಂತ ಹಂತದಲ್ಲಿ ಹೋರಾಟದ ಮೂಲಕ ಸಮಸ್ಯೆಗಳನ್ನು ಈಡೇರಿಸುವ ಮೂಲಕ ನ್ಯಾಯ ಒದಗಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ನೌಕರರ ಸಂಘದ ಕಾರ್ಯದರ್ಶಿ ಕಚ್ಚಿ ಮಾಳಪ್ಪ, ಉಪಾಧ್ಯಕ್ಷ ಹೆಚ್. ಜಡೇಮೂರ್ತಿ, ನೌಕರರಾದ ಕೆ.ಗೋವಿಂದಪ್ಪ, ಎನ್.ಜಡೆಪ್ಪ, ವೈ.ಉಮೇಶ, ಎಸ್.ಮಂಜುನಾಥ, ಪಾಮಪ್ಪ, ಸಿ.ಡಿ.ಪಾಂಡುರಂಗ, ಎಸ್.ಮಹಾಂತೇಶ, ವೈ.ಈರಣ್ಣ, ಸುಂದರರಾಜು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!