ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಸಿ ಬರಗಾಲ ಘೋಷಿಸುವಂತೆ ಒತ್ತಾಯಿಸಿ ಕಲಬುರ್ಗಿ ಬಂದ್

ಕಲಬುರಗಿ : ರೈತಪರ, ದಲಿತ, ಕನ್ನಡ, ಮಹಿಳಾ ಪರ ಸಂಘಟನೆಗಳ ವತಿಯಿಂದ ಒಗ್ಗಟ್ಟಾಗಿ ಹಸಿ ಬರಗಾಲ ಘೋಷಣೆ, ಸಾಲ ಮನ್ನಾ ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲಬುರಗಿ ಬಂದ್‌ ಮಾಡಲಾಯಿತು.
ಕಳೆದ ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ಅತಿವೃಷ್ಟಿಯಿಂದ ಅಪಾರ ಬೆಳೆ ಹಾನಿಯಾಗಿದ್ದು
ರೈತರ ನೆರವಿಗೆ ಸರ್ಕಾರ ನಿಂತು ಶಾಶ್ವತ ಪರಿಹಾರ ನೀಡುವಂತೆ ಒತ್ತಾಯಿಸಿ ಜಿಲ್ಲೆಯಲ್ಲಿನ ಅಂಗಡಿ, ಮುಂಗಟ್ಟು, ಮಾಲ್, ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟಿಸಲಾಯಿತು.
ಕಲಬುರಗಿ ನಗರದಲ್ಲಿನ ಕೇಂದ್ರ ಬಸ್‌ ನಿಲ್ದಾಣ ಸೇರಿದಂತೆ ಹುಮ್ನಾಬಾದ, ರಿಂಗ್ ರೋಡ್ ಸೇರಿ
ಇನ್ನಿತರ ಕಡೆಗಳಲ್ಲಿ ರಸ್ತೆ ತಡೆದ ರೈತರು
ಬೆಳಗ್ಗೆ 7:00 ಗಂಟೆಯಿಂದ ಸಾಯಂಕಾಲ 4:00 ರವರೆಗೆ ಸಂಪೂರ್ಣ ಕಲಬುರ್ಗಿ ಬಂದ್ ಮಾಡಿದರು.
ನಗರೇಶ್ವರ ಶಾಲೆಯಿಂದ ಜಗತ್ ಸರ್ಕಲ್ ವರೆಗೆ ಬೃಹತ್ ಮೆರವಣಿಗೆ ಮುಖಾಂತರ ಬಂದು ಮಾನವ ಸರಪಳಿ ಮಾಡಿ ರೈತ ಮುಖಂಡರು ಮಾತನಾಡಿದರು.
ಈ ಸಂದರ್ಭದಲ್ಲಿ ರೈತರು ರೈತ ಮುಖಂಡರ ಜೊತೆ ಪೊಲೀಸರ ವಾಗ್ವಾದ ನಡೆಯಿತು.
ರೈತರನ್ನು ಹತ್ತಿಕ್ಕುವ ಕೆಲಸ ಪೊಲೀಸರು ಮಾಡಿದರೂ ಸಹ ರೈತರು ಜಗ್ಗಲಿಲ್ಲ.
ವೀರಣ್ಣ ಗಂಗಾಣಿ ಅಧ್ಯಕ್ಷರು ಕಾಳಗಿ ಮತ್ತು ಚಿಂಚೋಳಿ ತಾಲೂಕ ರೈತ ಸೇನೆ, ಶಿವರಾಜ್ ಪಾಟೀಲ್ ಗೋಣಗಿ, ಮಲ್ಲು ಪಾಟೀಲ್, ರಮೇಶ್ ಹೆಬ್ಬಾಳ, ಲಕ್ಷ್ಮಿಕಾಂತ್ ಪಾಟೀಲ್ ಆಟೋ ಯೂನಿಯನ್ ಕಲಬುರ್ಗಿ, ದಯಾನಂದ ಪಾಟೀಲ್, ಚೆನ್ನವೀರ ಕಮಲಾಪುರ್, ಸಿದ್ದಪ್ಪ ಕಲಶೆಟ್ಟಿ ಸೇರಿದಂತೆ ಇನ್ನೂ ಅನೇಕ ರೈತ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ರೈತರು ಈ ಹೋರಾಟದಲ್ಲಿ ಭಾಗವಹಿಸಿದ್ದರು.

ವರದಿ : ಎಸ್ ವಿ ಗಂಗಾಣಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!