ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೂರ್ತಿ ಭಗ್ನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ಶಹಾಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿನ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಕನ್ನಡ ಭೂಮಿ‌ ಜಾಗೃತಿ ಸಮಿತಿಯ ವಕ್ತಾರ ಆನಂದ ತೆಗನೂರ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕಿಡಿಗೇಡಿಗಳು ಅಂಬಿಗರ ಚೌಡಯ್ಯನವರ ಮೂರ್ತಿಯ ಎಡಗೈ ಒಡೆದು ಹಾಕಿ, ಬಲಗೈಯಲ್ಲಿದ್ದ ವಚನ ಪುಸ್ತಕದ ಭಾಗ ಕಟ್ ಮಾಡಿ ಮೂರ್ತಿಯ ಮುಖ ಭಾಗಕ್ಕೆ ಕೆಸರು ಸಿಡಿಸಿ ಅಂಬಿಗ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಸಮಾಜ ಘಾತುಕ ಶಕ್ತಿಯನ್ನು ತಕ್ಷಣವೇ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಂಡು ಸರಕಾರದಿಂದ ಕೂಡಲೇ ಮತ್ತೆ ಮುತ್ತಗಾ ಗ್ರಾಮದಲ್ಲಿ ಅಂಬಿಗರ ಚೌಡಯ್ಯನವರ ಕಂಚಿನ ಮೂರ್ತಿ ಸ್ಥಾಪಿಸಬೇಕೆಂದು ಅವರು ಮನವಿ ಮಾಡಿದರು.
ಅಂಬಿಗರ ಚೌಡಯ್ಯನವರ ಮೂರ್ತಿ ಹಾನಿಗೊಳಿಸಿ ಸಮಾಜದಲ್ಲಿ ಶಾಂತಿ ಸೃಷ್ಠಿಸಲು ಮುಂದಾಗಿರುವ ಕಿಡಗೇಡಿಗಳನ್ನು ಬಂಧಿಸಿ ಕೂಡಲೇ ಗಡಿಪಾರು ಮಾಡುವಂತೆ ಆಗ್ರಹಿಸಿದರು. ಈ ಘಟನೆ ಸಮಾಜದ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ. ನಮ್ಮ ಭಾವನೆಗೆ ನೋವುಂಟು ಮಾಡಿದೆ. ಆದ್ದರಿಂದ ಸರಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!