ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೈಗಾರೀಕರಣ ಸ್ಥಾಪನೆಗೆ ಶಾಸಕರು ಸರಕಾರಕ್ಕೆ ಒತ್ತಾಯಿಸಲಿ :ಮಹೇಶ್ ಪಾಟೀಲ್ ಕಡಕೋಳ ಆಗ್ರಹ

ಕಲಬುರಗಿ/ ಯಡ್ರಾಮಿ : ತಾಲೂಕ ಘೋಷಣೆಯಾಗಿ ಹಲವಾರು ವರ್ಷಗಳು ಕಳೆದರೂ ಸಹ ಯಾವುದೇ ರೀತಿಯಿಂದ ಯಡ್ರಾಮಿ ತಾಲೂಕು ಅಭಿವೃದ್ಧಿ ಆಗದಿರುವುದು ದುರ್ದೈವದ ಸಂಗತಿಯಾಗಿದೆ. ತಾಲೂಕ ಘೋಷಣೆಯಾಗಿ ಹಲವಾರು ವರ್ಷಗಳಾದರೂ ತಾಲೂಕಿನಲ್ಲಿ ಯಾವುದೇ ರೀತಿಯ ಯಾವುದೇ ಅಭಿವೃದ್ಧಿಯ ಕಾಮಗಾರಿಗಳು ನಡೆದಿರುವುದಿಲ್ಲ. ಈ ಕೂಡಲೇ ತಾಲೂಕಿನ ಶಾಸಕರಾದ ಡಾ. ಅಜಯ್ ಸಿಂಗ್ ರವರು ಮುಖ್ಯಮಂತ್ರಿಗಳಿಗೆ ಯಡ್ರಾಮಿ ತಾಲೂಕಿನಲ್ಲಿ ಕೈಗಾರೀಕರಣಕ್ಕೆ ಒತ್ತು ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ಯಡ್ರಾಮಿ ತಾಲೂಕ ನಮ್ಮ ಕರ್ನಾಟಕ ಸೇನೆಯ ತಾಲೂಕ ಅಧ್ಯಕ್ಷರಾದ ಮಹೇಶ್ ಪಾಟೀಲ್ ಕಡಕೋಳ ಅವರು ಈ ಸಂದರ್ಭದಲ್ಲಿ ಶಾಸಕರಿಗೆ ಒತ್ತಾಯಿಸಿದ್ದಾರೆ.
ಅದೇ ರೀತಿಯಾಗಿ ಅತಿವೃಷ್ಟಿಯಿಂದ ಅಥವಾ ಅನಾವೃಷ್ಟಿಯಿಂದ ರೈತರ ಬೆಳೆಗಳು ಸಂಪೂರ್ಣ ಮಳೆಯ ಹೊಡೆತದಿಂದ ತತ್ತರಿಸಿ ಹೋಗಿದ್ದಾರೆ ರೈತರಿಗೆ ಆದ ನಷ್ಟವನ್ನು ಸರ್ಕಾರವೇ ತುಂಬಿಕೊಡಬೇಕು ಅದೇ ರೀತಿಯಾಗಿ ಅತಿ ಶೀಘ್ರದಲ್ಲಿ ಎಲ್ಲಾ ರೈತರ ಖಾತೆಗಳಿಗೆ ಬೆಳೆ ಪರಿಹಾರ ಧನವನ್ನು ಅತಿ ಶೀಘ್ರದಲ್ಲಿ ಬಿಡುಗಡೆಗೊಳಿಸಬೇಕು, ಸರಕಾರ ಘೋಷಣೆ ಮಾಡಿದರೆ ಸಾಲದು. ಆದಷ್ಟು ಶೀಘ್ರದಲ್ಲಿ ಅನುದಾನ ಬಿಡುಗಡೆಗೊಳಿಸಬೇಕು ಆದಷ್ಟು ಶೀಘ್ರದಲ್ಲಿ ರೈತರ ಖಾತೆಗಳಿಗೆ ಹಣ ಜಮೆ ಮಾಡಬೇಕು ಎಂದು ಈ ಸಂದರ್ಭದಲ್ಲಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!