ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಾಡಗಾಂವ್ (ಡಿ) ಸರ್ಕಾರಿ ಪ್ರಾಥಮಿಕ ಶಾಲೆಯ ಹುಡುಗಿಯರ ಕಬಡ್ಡಿ ತಂಡಕ್ಕೆ ಜಿಲ್ಲಾ ಮಟ್ಟದ ಕಿರೀಟ

ಬೀದರ್, ಅ. 15: ಬೀದರ್ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಿನ್ನೆ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಾಡಗಾಂವ್ (ಡಿ) ಸರ್ಕಾರಿ ಪ್ರಾಥಮಿಕ ಶಾಲೆಯ ಹುಡುಗಿಯರ ಕಬಡ್ಡಿ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟದ ಚಾಂಪಿಯನ್ ಆಗಿದೆ. ಈ ಜಯದೊಂದಿಗೆ ತಂಡವು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.

ತಂಡದ ವಿಜಯದಲ್ಲಿ ಮುಖ್ಯೋಪಾಧ್ಯಾಯರು ಹಾಗೂ ಶಾಲಾ ಸಿಬ್ಬಂದಿಯ ಪ್ರೋತ್ಸಾಹ ಮತ್ತು ಬೆಂಬಲ ಮಹತ್ತರ ಪಾತ್ರ ವಹಿಸಿದೆ. ವಿದ್ಯಾರ್ಥಿನಿಯರ ಶಿಸ್ತಿನ ಆಟ, ಒಗ್ಗಟ್ಟು ಮತ್ತು ಉತ್ತಮ ತಂಡ ಮನೋಭಾವ ಈ ಸಾಧನೆಯ ಮೂಲ ಅಂಶಗಳಾಗಿವೆ.
ದೈಹಿಕ ಶಿಕ್ಷಣ ಶಿಕ್ಷಕಿ ಮಿಸ್ ಸೊಂಕಂಬಳೆ ಪಂಚಶೀಲಾ ಅವರ ವಿಶಿಷ್ಟ ಮಾರ್ಗದರ್ಶನ ಮತ್ತು ತರಬೇತಿ ತಂಡದ ಯಶಸ್ಸಿಗೆ ಕಾರಣವಾಗಿದೆ.
ಈ ಜಯದ ಹಿನ್ನೆಲೆಯಲ್ಲಿ ಶಾಲಾ ಸಮುದಾಯವು ಎಲ್ಲಾ ವಿದ್ಯಾರ್ಥಿನಿಯರು ಮತ್ತು ಶಿಕ್ಷಕಿಯರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!