ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಐಟಿಐ ಕಾಲೇಜಿನಲ್ಲಿ ಸಮಸ್ಯೆಗಳ ತಾಂಡವ.

ಶಾಸಕರಿಂದ ಪರಿಹಾರದ ಭರವಸೆ

ಯಾದಗಿರಿ/ಗುರುಮಠಕಲ್: ಪಟ್ಟಣದ ಹೊರವಲಯದಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸುವ ನಿಟ್ಟಿನಲ್ಲಿ ಅಧ್ಯತೆಯ ಕ್ರಮ ವಹಿಸುವದಾಗಿ ಶಾಸಕರಾದ ಶರಣಗೌಡ ಕಂದಕೂರು ಭರವಸೆ ನೀಡಿದರು.

ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದ ಶಾಸಕ ಶರಣಗೌಡ ಕಂದಕೂರು ಅವರನ್ನು ಭೇಟಿಯಾದ ಐಟಿಐ ಪ್ರಶಿಕ್ಷಣಾರ್ಥಿಗಳು ತಮ್ಮ ಕಾಲೇಜಿನ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಮಾಡಿದರು.

ಕಾಲೇಜಿನಲ್ಲಿನ ಮೂಲ ಸೌಕರ್ಯಗಳ ಕೊರತೆ, ವಿದ್ಯುತ್ ಸಮಸ್ಯೆ, ಸಿಬ್ಬಂದಿ ಕೊರತೆ ಸೇರಿದಂತೆ ಸಂಸ್ಥೆಯಲ್ಲಿನ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದು ಪರಿಹಾರಕ್ಕಾಗಿ ಪ್ರಶಿಕ್ಷಣಾರ್ಥಿಗಳು ಕೋರಿದರು.
ಪ್ರಶಿಕ್ಷಣಾರ್ಥಿಗಳ ಸಮಸ್ಯೆಗಳನ್ನು ಆಲಿಸಿದ ಶಾಸಕರು ಸ್ಥಳದಿಂದಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾತನಾಡಿ, ಕೂಡಲೇ ಕಾಲೇಜಿಗೆ ಭೇಟಿ ನೀಡಿ ಸಮಸ್ಯೆಗಳ ಕುರಿತು ಪರಿಶೀಲಿಸಿ ಬಗೆಹರಿಸುವಂತೆ ಸೂಚಿಸಿದರು.

ಅವಶ್ಯವಾದಲ್ಲಿ ಸಂಸ್ಥೆಯ ಅನುಕೂಲಕ್ಕೆ ಶಾಸಕರ ಅನುದಾನವನ್ನು ಒದಗಿಸಲು ಸಿದ್ದವಿದ್ದು ಕೂಡಲೇ ಐಟಿಐ ಪ್ರಶಿಕ್ಷಣಾರ್ಥಿಗಳ ಸಮಸ್ಯೆ ಬಗೆಹರಿಸಿ ಎಂದು ತಾಕೀತು ಮಾಡಿದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!