ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಿಯಾಂಕ ಖರ್ಗೆಗೆ ನಿಂದನೆ ಸಹಿಸಲಾರದು | ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

ಗುರುಮಠಕಲ್: ಅಕ್ಟೋಬರ್ 18 – ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಜಿ ಸಚಿವ ಹಾಗೂ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಅವರು ಮಾತನಾಡಿ, “ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಪ್ರಿಯಾಂಕ ಖರ್ಗೆ ಅವರು ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಇತ್ತೀಚಿಗೆ ಕೆಲವರು ಉದ್ದೇಶಪೂರ್ವಕವಾಗಿ ಅವರ ವಿರುದ್ಧ ಅಪಪ್ರಚಾರ ಮತ್ತು ಬೆದರಿಕೆ ಹಾಕುತ್ತಿರುವುದು ಖಂಡನೀಯ. ಯಾವುದೇ ಕಾರಣಕ್ಕೂ ಈ ರೀತಿಯ ವರ್ತನೆ ಸಹಿಸಲಾಗುವುದಿಲ್ಲ,” ಎಂದು ಎಚ್ಚರಿಸಿದರು.

ಮುಂದುವರಿದು ಅವರು, “ಈ ರೀತಿ ಕೃತ್ಯಗಳು ಮುಂದುವರೆದರೆ ರಾಜ್ಯದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ದಲಿತ ಸಮುದಾಯದವರು ತಕ್ಕ ಪಾಠ ಕಲಿಸುತ್ತಾರೆ,” ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಚಪೆಟ್ಲಾ ಮಾತನಾಡಿ, “ಭಾಜಪ ಹಾಗೂ ಆರ್.ಎಸ್.ಎಸ್ ನವರು ಪ್ರಿಯಾಂಕ ಖರ್ಗೆ ಅವರ ಜನಪ್ರಿಯತೆ ಸಹಿಸದೆ ಮತ್ತು ಅವರು ಪಿ ಎಸ್ ಐ ಹಗರಣ, ಭಾಜಪ 40% ಕಮಿಷನ್ ನಂತಹ ಭಾಜಪ ಹಗರಣ ಹೊರಗೆ ತಂದಿರುವ ಕಾರಣ ಉದ್ದೇಶಪೂರ್ವಕವಾಗಿ ಅವರ ನಿಂದಿಸುವದು ಹಾಗೂ ತೇಜೋವಧೆಗೆ ಯತ್ನಿಸುತ್ತಿವೆ. ಇದನ್ನು ಗುರುಮಠಕಲ್ ಕಾಂಗ್ರೆಸ್ ಕಟ್ಟುನಿಟ್ಟಾಗಿ ವಿರೋಧಿಸುತ್ತದೆ,” ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂಜೀವ ಕುಮಾರ್ ಚಂದಾಪುರ, ಪಕ್ಷದ ಮುಖಂಡರಾದ ಆಶಪ್ಪ ಗಾಜರಕೊಟ್, ಭೀಮಶಪ್ಪ ರಾಂಪುರ, ಚನ್ನಬಸಪ್ಪ ಗಾಜರಕೊಟ್, ಚಂದ್ರಯ್ಯ ಗುತ್ತೇದಾರ, ವಿಜಯಕುಮಾರ್ ನೀರೆಟಿ, ಬಾಬು ತಲಾರಿ, ಮಾಣಿಕ್ ಮುಕಡಿ ಹಾಗೂ ಭೀಮಶಪ್ಪ ಶನಿವಾರಂ, ಅಶೋಕ ಶನಿವಾರಂ ಉಪಸ್ಥಿತರಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!