ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ಬಿಇಒ ಕಛೇರಿ ಆರಂಭಿಸುವಂತೆ ರಾಜ್ಯ ಮಟ್ಟದಲ್ಲಿ ಧ್ವನಿ ಎತ್ತುವೆ : ಶಶೀಲ್ ಜಿ.ನಮೋಶಿ

ಬಳ್ಳಾರಿ / ಕಂಪ್ಲಿ: ಕಂಪ್ಲಿಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಒತ್ತಡ ಏರಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸದಸ್ಯ(ಈಶಾನ್ಯ ಶಿಕ್ಷಕರ ಕ್ಷೇತ್ರ) ಶಶೀಲ್ ಜಿ.ನಮೋಶಿ ಹೇಳಿದರು.
ಅವರು ಶುಕ್ರವಾರ ಪಟ್ಟಣದ ಅತಿಥಿ ಗೃಹದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಗಣತಿಗೆ ಶಿಕ್ಷಕರನ್ನು ಬಳಸಿಕೊಂಡು, ಅವರಿಗೆ ತೊಂದರೆ ನೀಡುತ್ತಿದ್ದಾರೆ. ಕಂಪ್ಲಿ ಹೊಸ ತಾಲೂಕು ಕೇಂದ್ರವಾದ ಮೇಲೆ ಇಲ್ಲಿನ ಶಿಕ್ಷಕರ ಸಂಬಳಕ್ಕೆ ಸಂಬಂಧಿಸಿದಂತೆ ತಾಲೂಕುವಾರು ಹಣ ಹಂಚಿಕೆ ಮಾಡಿಲ್ಲ. ಆದ್ದರಿಂದ ಇಲ್ಲಿನ ಶಿಕ್ಷಕರಿಗೆ ತುಂಬಾ ಸಮಸ್ಯೆ ಉಂಟಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಶಿಕ್ಷಕರ ಖಾಲಿ ಹುದ್ದೆಗಳಿವೆ. ಆದಷ್ಟು ಬೇಗ ಸರ್ಕಾರ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು. ಒಳ ಮೀಸಲಾತಿ ನೆಪದಲ್ಲಿ ಶಿಕ್ಷಕರ ನೇಮಕಾತಿ ಕಡೆಗಣಿಸಿದ್ದಾರೆ. ಅತಿಥಿ ಶಿಕ್ಷಕರ ಬಾಕಿ ವೇತನ ನೀಡಬೇಕು ಎಂದರು. ನಂತರ ಶಶೀಲ್ ಜಿ. ನಮೋಶಿಗೆ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಶಿವರಾಜ, ರೋಶನ್, ಶಿವುಕುಮಾರ, ನವೀನ್ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!