ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗ್ರಾಮ ಠಾಣೆಯಲ್ಲಿ ನೆಲೆಸಿರುವ ಕುಟುಂಬಗಳಿಗೆ ಎ ಖಾತಾ ನೀಡದೇ, ರಿಯಲ್ ಎಸ್ಟೇಟ್‌ದಾರರಿಗೆ ಬಿ ಖಾತಾ ನೀಡುತ್ತಿದ್ದಾರೆ : ವಿ.ರಾಜಶೇಖರ ಗಂಭೀರ ಆರೋಪ

ಬಳ್ಳಾರಿ/ ಕುಡತಿನಿ : ಗ್ರಾಮ ಠಾಣೆಯಲ್ಲಿ ನೆಲೆಸಿರುವ ಕುಟುಂಬಗಳಿಗೆ ಎ ಖಾತಾ ನೀಡದೆ, ರಿಯಲ್ ಎಸ್ಟೇಟ್‌ದಾರರಿಗೆ ಬಿ ಖಾತಾ ನೀಡುತ್ತಿದ್ದು, ಇದರಲ್ಲಿ ಸಾಕಷ್ಟು ಅವ್ಯವಹಾರವಾಗಿದ್ದು, ಕೂಡಲೇ ತನಿಖೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮವಹಿಸಲು, ಮೂಲ ಕುಟುಂಬಗಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ಪ. ಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಿ. ರಾಜಶೇಖರ ಹೇಳಿದರು.
ಕುಡತಿನಿ ಪಟ್ಟಣ ಪಂಚಾಯಿತಿ ಕಛೇರಿಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದಿನ ಬಂಗಾರಪ್ಪ ಸರ್ಕಾರದ ಅವಧಿ ವೇಳೆ ಕುಡತಿನಿ ಪಟ್ಟಣದಲ್ಲಿದ್ದ 10 ಎಕರೆ ಜಮೀನಿನಲ್ಲಿ ಎಸ್ ಸಿ, ಎಸ್ ಟಿ ಯ ಬಡ ಕುಟುಂಬಗಳಿಗೆ 30-40 ಅಳತೆಯ ಸೈಟ್ ಹಂಚಿಕೆ ಮಾಡಿಕೊಟ್ಟಿದ್ದರು. ಅದರಂತೆ ಇಲ್ಲಿನ ಸಾಕಷ್ಟು ಕುಟುಂಬಗಳು ಪ. ಪಂ. ಗೆ ತೆರಿಗೆ ಕಟ್ಟುವ ಮೂಲಕ ಜೀವನ ನಡೆಸುತ್ತಿದ್ದಾರೆ. ಆದರೆ, ಇಲ್ಲಿನ ಕುಟುಂಬಗಳಿಗೆ ನಮೂನೆ-3 ನೀಡಲು ಮೀನಾಮೇಷ ಎಣಿಸಲಾಗುತ್ತಿದೆ ಗ್ರಾಮ ಠಾಣೆಯಲ್ಲಿ ಬರೀ 782 ಜನರಿಗೆ ಎ ಖಾತಾ ಇದ್ದು, ಬರೀ ಆರು ತಿಂಗಳಲ್ಲಿ 1240 ಜನರಿಗೆ ಬಿ ಖಾತಾ ಮಾಡಿದ್ದಾರೆ. ಇವರಿಗೆ ಬಡವರ ಕಾಳಜಿ ಇಲ್ಲ ಬದಲಾಗಿ ರಿಯಲ್ ಎಸ್ಟೇಟ್ ದಾರರಿಗೆ ಹೆಚ್ಚಿನ ಆಧ್ಯತೆ ನೀಡಿದ್ದಾರೆ ಇದರಲ್ಲಿ ಕಂದಾಯ ಇಲಾಖೆಯೂ ನೇರ ಹೊಣೆಯಾಗಿದೆ. ಮೂಲ ಕುಟುಂಬಗಳಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಕೂಡಲೇ ಸಂಬಂಧಿಸಿದ ಅಧಿಕಾರಿಗಳು 14, 15ನೇ ವಾರ್ಡಿನಲ್ಲಿರುವ ಕುಟುಂಬಗಳಿಗೆ ಫಾರಂ-3 ನೀಡಬೇಕು ಎಂದರು.
ಜನರಿಗೋಸ್ಕರ ಕೆಲಸ ಮಾಡಲು ಪ.ಪಂ. ಗೆ ಬಂದಿದ್ದೇವೆ. ಜನ ಸೇವೆಯೇ ಜನಾರ್ದನ ಸೇವೆ ಎಂಬ ನಿಲುವನ್ನು ಹೊಂದಿದ್ದು, ಜನರ ಸೇವೆಗೆ ಸದಾ ಶ್ರಮಿಸುವೆ. ಕುಡತನಿ ಪ. ಪಂ. ಯಲ್ಲಿ 2020ರ ಅಕ್ಟೋಬರ್ 27ರಂದು ನಮಗೆ ಅಧ್ಯಕ್ಷ ಸ್ಥಾನ ಲಭಿಸಿತ್ತು. ಅದರಂತೆಯೇ 30 ತಿಂಗಳು ಅಧ್ಯಕ್ಷ ಸ್ಥಾನವನ್ನು ಸಂಪೂರ್ಣವಾಗಿ ನಿಭಾಯಿಸಿದ ಅನುಭವವಿದೆ. ಆದರೆ, ನಮ್ಮ ಅವಧಿ ನಂತರ ಅಧ್ಯಕ್ಷ ಸ್ಥಾನದ ಮೀಸಲಾತಿಯು ತಡವಾಗಿ ಬಂದಿದ್ದರಿಂದ 16 ತಿಂಗಳು ತಹಶೀಲ್ದಾರರು ಆಡಳಿತಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು. ಹೀಗಾಗಿ ಸಂಪೂರ್ಣವಾಗಿ ಐದು ವರ್ಷದ ಅವಧಿ ಪೂರ್ಣಗೊಂಡಿಲ್ಲ. ಆದ್ದರಿಂದ ಮುಂದಿನ 16 ತಿಂಗಳು ಕಾಲಾವಕಾಶ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದು, ಅವಕಾಶ ನೀಡುವ ಆಶಾಭಾವನೆ ಇದೆ ಎಂದರು.
ಇಲ್ಲಿನ ಸಭೆಯಲ್ಲಿ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷೆ ಆರ್. ಸುಜಾತ ಸತ್ಯಪ್ಪ, ಉಪಾಧ್ಯಕ್ಷ ಪಂಪಾಪತಿ ಕನಕೇರಿ, ಮುಖ್ಯಾಧಿಕಾರಿ ತೀರ್ಥಪ್ರಸಾದ್, ಕಂದಾಯ ನಿರೀಕ್ಷಕಿ ತಾಯಮ್ಮ, ಸದಸ್ಯರು, ಸಿಬ್ಬಂದಿ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!