ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಾಲಕರ ಸಭೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ.

ಯಾದಗಿರಿ/ಗುರುಮಠಕಲ್: ಪಟ್ಟಣದ ಶ್ರೀರಾಮ್ ಎಜ್ಯುಕೇಶನಲ್ ಡೆವೆಲಪ್ ಮೆಂಟ್ ಟ್ರಸ್ಟ್ (ರಿ.) , ಜ್ಞಾನವೃಕ್ಷ ನವೋದಯ ತರಬೇತಿ ಸಂಸ್ಥೆಯು ತರಬೇತಿ ಪಡೆಯುವ ವಿದ್ಯಾರ್ಥಿಗಳ ಪಾಲಕರ ಸಭೆ ಮತ್ತು ಸಂಸ್ಥೆಯಿಂದ ತರಬೇತಿ ಪಡೆದು ಸೈನಿಕ, ಮೊರಾರ್ಜಿ, ನವೋದಯ ಶಾಲೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಇದೇ ತಿಂಗಳ 26 ರವಿವಾರದಂದು ನಾರಾಯಣಪೇಟ ರಸ್ತೆಗೆ ಹೊಂದಿಕೊಂಡಿರುವ ನಳಂದ ಸ್ಟಡಿ ಕ್ಯಾಂಪಸ್ ನಲ್ಲಿ ಆಯೋಜಿಸಲಾಗಿದೆ ಎಂದು ರಮೇಶ್ ಅಲಸೂರ ಸಂಸ್ಥೆಯ ಸಂಸ್ಥಾಪಕರು ಹಾಗೂ ಅಧ್ಯಕ್ಷರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯ ನಿಶ್ಕಲ ಮಂಟಪದ ನಿಜಗುಣಾನಂದ ಸ್ವಾಮಿಗಳು ವಹಿಸಲಿದ್ದಾರೆ, ನೇತೃತ್ವವನ್ನು ಗುರುಮಠಕಲ್ ಖಾಸಮಠದ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ವೈಜ್ಞಾನಿಕ ಸಂಶೋದನಾ ಪರಿಷತ್ತಿನ ಸಂಸ್ಥಾಪಕರು ಹುಲಿಕಲ್ ನಟರಾಜ, ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ ಐ ಹಣಮಂತು ಬಂಕಲಗಿ, ಜಗವಾಣಿ ಪತ್ರಕರ್ತರಾದ ವಾಸುದೇವ, ಶಿಕ್ಷಣ ಸಂಯೋಜಕರಾದ ರವೀಂದ್ರ ಚೌವ್ಹಾಣ್ ಭಾಗವಹಿಸಲಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ವೀರೇಶ ನರ‍್ವ, ಭೀಮು ಗಿರಿಗಿರಿ, ಗುಂಡೇಶ ಹಲಗಿ ಭಾಗಿಯಾಗಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!