ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇನ್ಫೋಸಿಸ್ – ಕರ್ನಾಟಕ ಮಾಧ್ಯಮ ಅಕಾಡೆಮಿಯಅತ್ಯುನ್ನತ AI ತರಬೇತಿಗೆ ಮಾಲತೇಶ್ ಅರಸ್ ಆಯ್ಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‍ಫೋಸಿಸ್ ಜೊತೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೈಗೊಂಡ ಮೊದಲ ಪತ್ರಕರ್ತರ ಸಾಫ್ಟ್ ಸ್ಕಿಲ್ ತರಬೇತಿಗೆ ಜೀ ಕನ್ನಡ ನ್ಯೂಸ್ ಹಿರಿಯ ವರದಿಗಾರರು ಹಾಗೂ ಈ ನಗರವಾಣಿ ಸಂಪಾದಕರಾದ ಚಿತ್ರದುರ್ಗದ ಮಾಲತೇಶ್ ಅರಸ್ ಆಯ್ಕೆಯಾಗಿದ್ದಾರೆ.

ಇನ್ಫೋಸಿಸ್ ಸಿಎಸ್‍ಆರ್ ಯೋಜನೆಯ “ಸ್ಪ್ರಿಂಗ್‍ಬೋರ್ಡ್” ಪ್ಲಾಟ್‍ಫಾರ್ಮ್ ಮೂಲಕ ಪತ್ರಕರ್ತರ ಡಿಜಿಟಲ್ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಸಾಮರ್ಥ್ಯ ನಿರ್ಮಾಣ ಈ ಒಡಂಬಡಿಕೆಯ ಉದ್ದೇಶವಾಗಿದೆ.

“ಇನ್‍ಫೋಸಿಸ್ ಸ್ಪ್ರಿಂಗ್‍ಬೋರ್ಡ್ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯ ಸಹಭಾಗಿತ್ವವು ಬದಲಾಗುತ್ತಿರುವ ಹೊಸ ಮಾಧ್ಯಮಕ್ಕೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಈ ವಿನೂತನ ಪ್ಲಾಟ್‍ಫಾರಂ ಮಾಧ್ಯಮ ವೃತ್ತಿಪರರ ಕೌಶಲ್ಯ ಉನ್ನತೀಕರಣಕ್ಕೆ, ಅದರಲ್ಲೂ ವಿಶೇಷವಾಗಿ ಪತ್ರಕರ್ತರಿಗೆ ವೇಗವಾಗಿ ಬದಲಾಗುತ್ತಿರುವ ಸನ್ನಿವೇಶಗಳಿಗೆ ಅನುಗುಣವಾಗಿ ತಾಂತ್ರಿಕ ಪರಿಣತಿ ಹಾಗೂ ಸುದ್ದಿಯನ್ನು ಪ್ರಸ್ತುತಪಡಿಸುವ ಕೌಶಲವನ್ನು ಒದಗಿಸಲಿದೆ” ಎಂಬ ಆಶಯವನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಅವರು ವ್ಯಕ್ತಪಡಿಸಿದ್ದಾರೆ.

“ಇನ್‍ಫೋಸಿಸ್ ಸ್ಪ್ರಿಂಗ್‍ಬೋರ್ಡ್ ಶಿಕ್ಷಣ ಕುರಿತ ಸಿಎಸ್‍ಆರ್ ಕಾರ್ಯಕ್ರಮವಾಗಿದೆ. ಸೆ. 8 ರಂದು ಇನ್‍ಫೋಸಿಸ್ ಸ್ಪ್ರಿಂಗ್‍ಬೋರ್ಡ್ ಮಾಧ್ಯಮ ಅಕಾಡೆಮಿಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿತ್ತು. ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಸ್ಪ್ರಿಂಗ್‌ ಬೋರ್ಡ್‌ನ ಡಿಜಿಟಲ್ ವಿಷಯಗಳಿಗೆ ಪ್ರವೇಶ ಲಭಿಸಲಿದೆ ಮತ್ತು ಅವರು ಸಾಫ್ಟ್ ಸ್ಕಿಲ್ ಗಳು, ವ್ಯಕ್ತಿತ್ವ ವಿಕಾಸ ಹಾಗೂ ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಇತ್ತೀಚಿನ ತಂತ್ರಜ್ಞಾನಗಳ ಅವಲೋಕನ ಕುರಿತ ವಿಷಯಗಳಿಂದ ಪ್ರಯೋಜನ ಪಡೆಯಬಹುದು.

ತರಬೇತಿ ಇನ್‍ಫೋಸಿಸ್ ಸ್ಪ್ರಿಂಗ್‍ಬೋರ್ಡ್ ಕಾರ್ಯಕ್ರಮದಡಿ ಪತ್ರಕರ್ತರಿಗೆ ಮೂರು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ
ಇದರಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಅಗತ್ಯ ಕೌಶಲ್ಯಗಳು, ಕೃತಕ ಬುದ್ಧಿಮತ್ತೆಯ ಬಳಕೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದಂತೆ ತರಬೇತಿ ನೀಡಲಾಗುವುದು ಎಂದು ಇನ್ಫೋಸಿಸ್ ನ ಹಿರಿಯ ಉಪಾಧ್ಯಕ್ಷ (ಇ ಟಿ ಎ) ಶ್ರೀ ಸತೀಶ ಬಿ. ನಂಜಪ್ಪ ಅವರು ಅಭಿಪ್ರಾಯ ಪಟ್ಟಿದ್ದಾರೆ.
ಇನ್ಫೋಸಿಸ್ ಸಂಸ್ಥೆಯು ಪ್ಲಾಟ್‍ಫಾರ್ಮ್ ಮತ್ತು ಪರಿಣತಿ ಒದಗಿಸಲಿದ್ದು, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುಣಮಟ್ಟದ ಸುಧಾರಣೆಯ ನಿಟ್ಟಿನಲ್ಲಿ ಇದೊಂದು ಮಹತ್ವದ ಉಪಕ್ರಮವಾಗಿದೆ. ಹೆಚ್ಚು ಪತ್ರಕರ್ತರಿಗೆ ತರಬೇತಿ ನೀಡುವ ಆಶಯದೊಂದಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯು ಮುಂದಡಿಯಿಟ್ಟಿದೆ.
ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ, ಸದಸ್ಯ ಹೆಚ್.ವಿ.ಕಿರಣ್, ಕಾರ್ಯದರ್ಶಿ ಎಂ.ಸಹನಾ, ಇನ್‍ಫೋಸಿಸ್ ಅಧಿಕಾರಿಗಳಾದ ಬಿ.ಸತೀಶ, ನಂಜಪ್ಪ, ಸಂತೋಷ್ ಅನಂತಪುರ, ಬಿಳಿಗಿರಿ ರಂಗ ಮೊದಲಾದವರು ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!