ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಾಲ್ಮೀಕಿ ಸಮಾಜವನ್ನು ಅವಮಾನಿಸಿದ ರಮೇಶ ಕತ್ತಿ ವಿರುದ್ಧ ಕಾನೂನು ಕ್ರಮಕ್ಕೆ ಭೀಮರಾಯ ದೊರೆ ಆಗ್ರಹ

ಕಲಬುರಗಿ/ ಚಿತ್ತಾಪುರ : ಮಹರ್ಷಿ ವಾಲ್ಮೀಕಿ ಸಮಾಜವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನಿಸಿದ ಮಾಜಿ ಸಂಸದ ರಮೇಶ ಕತ್ತಿ ಅವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾನೂನಿನಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಶ್ರೀ ಮಹರ್ಷಿ ವಾಲ್ಮೀಕಿ ಸಮಾಜ ನೇತೃತ್ವದಲ್ಲಿ ತಹಶೀಲ್ ಕಚೇರಿಯ ಎದುರು ಪ್ರತಿಭಟಿಸಿದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಜಿ. ಪರಮೇಶ್ವರ ಅವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.
ನಂತರ ತಾಲೂಕು ಅಧ್ಯಕ್ಷ ಭೀಮರಾಯ ದೊರೆ ಮಾತನಾಡಿ, ಅ. 19 ರಂದು ಬಿಎಕೆ ಮಾಡೇಲ್ ಹೈಸ್ಕೂಲ್ ಮೈದಾನದಲ್ಲಿ ಡಿ.ಸಿ.ಸಿ ಬ್ಯಾಂಕಿನ ಚುನಾವಣಾ ಮತದಾನ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಡಿ.ಸಿ.ಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ಬೆಲ್ಲದ ಬಾಗೇವಾಡಿಯ ರಮೇಶ ವಿಶ್ವನಾಥ ಕತ್ತಿ ವಾಲ್ಮೀಕಿ ಸಮುದಾಯದವರನ್ನು ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ಅಮಾನಿಸಿದ್ದರಿಂದ ರಾಜ್ಯಾದ್ಯಂತ 75 ಲಕ್ಷ ವಾಲ್ಮೀಕ ಸಮುದಾಯದ ಮನಸ್ಸಿಗೆ ತೀವ್ರ ಘಾಸಿ ಆಗಿದೆ ಮೇಲಾಗಿ ನಮ್ಮ ಭಾವನೆಗಳಿಗೆ ದಕ್ಕೆ ಆಗಿರುವುದಲ್ಲದೆ ತೀವ್ರ ಆಘಾತವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಂಭವವಿದೆ. ಈಗಾಗಲೇ ರಮೇಶ ಕತ್ತಿ ಹುಕ್ಕೇರಿ ವಿದ್ಯುತ್ ಮಂಡಳಿ ಚುನಾವಣೆಯಲ್ಲಿ ಕಳೆದ ಮೂರು ಬಾರಿ ಸತತವಾಗಿ ವಾಲ್ಮೀಕಿ ಸಮುದಾಯಕ್ಕೆ ಅವಹೇಳನಕಾರಿಯಾಗಿ ಬಿಂಬಿಸುವ ಕೆಲಸ ಸತತವಾಗಿ ಮಾಡಿರುತ್ತಾನೆ. ಅದಲ್ಲದೆ ಈಗಾಗಲೇ ಈತ ಸತತವಾಗಿ ಕೆಳ ಸಮುದಾಯಗಳ ಭಾವನೆಗಳಿಗೆ ಘಾಸಿ ಉಂಟು ಮಾಡಿರುತ್ತಾರೆ. ಕಾರಣ ದಲಿತ ಸಮುದಾಯದ ಭಾವನಗಳಿಗೆ ಧಕ್ಕೆ ತಂದಿರುವ ಈತನ ಮೇಲೆ ದೌರ್ಜನ್ಯ ತಡೆ ಕಾಯ್ದೆ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.
ಯುವ ಅಧ್ಯಕ್ಷ ರಾಜು ದೊರೆ, ಮುಖಂಡರಾದ ಭೀಮರಾವ್ ದೊರೆ, ಮಹಾದೇವಪ್ಪ ಚೂರಿ, ಸಂಜಯ ಬುಳಕರ್, ಸಾಬಣ್ಣ ಮುಸಲಾ, ಭಾಗಪ್ಪ ದೊರೆ ಮೊಗಲಾ, ಭಾಗಪ್ಪ ನಾಯ್ಕೋಡಿ, ಸಾಬಣ್ಣ ಕುಂಬಾರಹಳ್ಳಿ, ಚಂದ್ರಕಾಂತ ದೊರೆ ಮೊಗಲಾ, ಈರಣ್ಣ ದೊರೆ, ಹಣಮಂತ ಗಿಲಗಿನ್, ತಾಯಪ್ಪ ದೊರೆ, ಚಂದ್ರು ನಾಯ್ಕೋಡಿ, ಮೊನಪ್ಪ ದೊರೆ, ರಾಯಪ್ಪ ದೊರೆ, ರಮೇಶ್ ಕೋರವಾರ, ದೇವಿಂದ್ರಪ್ಪ ನಾಯಕ, ಶಿವಶರಣಪ್ಪ ಸುಬೇದಾ‌ರ್, ವಿಶಾಲ್ ನಾಯಕ ಸೇರಿದಂತೆ ಇತತರು ಇದ್ದರು.
ನಂತರ ಆರಕ್ಷಕ ಉಪನಿರೀಕ್ಷಕರಿಗೆ ಮನವಿ ಸಲ್ಲಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!