ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಂಘ ಸಭೆ

ಮಂಡ್ಯ :ದಿನಾಂಕ 25.10.2025 ರಂದು ಮಂಡ್ಯದ ತಗ್ಗಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಂಘ ಸಭೆ ನಡೆಸಿದ್ದು ಈ ಸಭೆಗೆ ಕರ್ನಾಟಕದ ಹಲವಾರು ಜಿಲ್ಲೆಗಳಿಂದ ಸುಮಾರು 150 ಕ್ಕೂ ಹೆಚ್ಚು ವಿವಿಧ ಸರ್ಕಾರಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಿಕ್ಷಣ ಪ್ರೇಮಿಗಳು ಆಗಮಿಸಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಚಲುವರಸನ ಕೊಪ್ಪಲು ಸರ್ಕಾರಿ ಶಾಲೆಯ ಮುಖ್ಯ ಉಪಾಧ್ಯಾಯರಾದ ಕುಮಾರ್ ಹಾಗೂ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ನರಸಿಂಹಮೂರ್ತಿ ಹಾಗೂ ರೈತ ಮುಖಂಡರುಗಳು ಎಸ್ ಡಿ ಎಮ್ ಸಿ ರಾಜ್ಯ ಪದಾಧಿಕಾರಿಗಳು ಸೇರಿ ಉದ್ಘಾಟಿಸಿದರು. ಇಡೀ ಕರ್ನಾಟಕದಾದ್ಯಂತ ಹಾಗೂ ದೇಶದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಏಕರೂಪ ಗುಣಮಟ್ಟದ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಕಾರ್ಯಕ್ರಮದಲ್ಲಿ ಒಮ್ಮತದ ಅಭಿಪ್ರಾಯ ಮೂಡಿತು. ಈ ಕಾರ್ಯಕ್ರಮವನ್ನು ತಗ್ಗಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಅನಿಲ್ ಹಾಗೂ ತಂಡದವರು ಅಚ್ಚುಕಟ್ಟಾಗಿ ಆಯೋಜನೆ ಮಾಡಿದರು. ರಾಜ್ಯ ಪದಾಧಿಕಾರಿಗಳಾದ ಬುದನೂರು ರಘು, ಸಂತೋಷ್ ಮಂಡ್ಯಗೌಡ, ಕೂರ್ಗಳ್ಳಿ ರೇವಣ್ಣ, ಅಡ್ವೋಕೇಟ್ ರಘುಪತಿ, ಕೀಲಾರ ರಮೇಶ್, ಶಶಿಧರ್ ಹಾಗೂ ರಾಜ್ಯ ಪದಾಧಿಕಾರಿಗಳು, ಎಲ್ಲಾ ಜಿಲ್ಲೆಯ ಸುಮಾರು 150ಕ್ಕೂ ಹೆಚ್ಚು ಎಸ್‌ಡಿಎಂಸಿ ಅಧ್ಯಕ್ಷರು ಸದಸ್ಯರು ಉಪಾಧ್ಯಕ್ಷರು ಶಿಕ್ಷಣ ಪ್ರೇಮಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವರದಿ ಹೆಚ್. ಆರ್. ಶಂಕರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!