ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿದ್ಯಾರ್ಥಿಗಳ ಹತ್ತಿರ ಹಣ ವಸೂಲಿ ಮಾಡಿದ ಮುಖ್ಯಶಿಕ್ಷಕ ಸೋಮನಾಥ ಬೇಲೂರೆ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದ ಸರಕಾರಿ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಂದ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು.

ಕಿಟ್ಟಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಸೋಮನಾಥ ಬೇಲೂರೆ ಅವರು 10ನೇ ತರಗತಿಯ ಮಕ್ಕಳು ಪರೀಕ್ಷಾ ಶುಲ್ಕ ಕಟ್ಟಲು ಹೊದಾಗ ಶುಲ್ಕ ಕಟ್ಟಿಸಿಕೊಳ್ಳದೇ ತಿರಸ್ಕರಿಸಿದ್ದಾರೆ. ಆಮೇಲೆ ಆ ಮಕ್ಕಳು ತಮ್ಮ ತಂದೆಯೊಂದಿಗೆ ಶಾಲೆಗೆ ಹೋಗಿ ಕೇಳಿದರೆ ಅವರ ತಂದೆಯನ್ನೆ ಕುತ್ತಿಗೆಗೆ ಕೈಹಾಕಿ ತಳ್ಳಿದ್ದಾರೆ ಇಂತಹ ಮುಖ್ಯ ಗುರುಗಳನ್ನು ಕೂಡಲೇ ವಜಾಗೊಳಿಸಬೇಕೆಂದು ಶಾಲೆಯ ವಿದ್ಯಾರ್ಥಿಗಳು, ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಿಎಸ್‌ಪಿ ತಾಲೂಕ ಅಧ್ಯಕ್ಷರಾದ ಶಂಕರ ಫುಲೆ ಅವರು ಮಾತನಾಡಿ ಶಾಲೆಯ ಬಡ ಕುಟುಂಬದ ಮಕ್ಕಳಿಗೆ ಶಿಕ್ಷಣದಿಂದ ವಂಚಿತ ಮಾಡುತಿದ್ದಾರೆಂದು ಆರೋಪಿಸಿ, ಇಂತಹ ನೀಚ ವಿಚಾರದ ಮುಖ್ಯ ಗುರುಗಳ ಮೇಲೆ ಕೂಡಲೇ ಸೂಕ್ತ ಕಾನೂನ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ. ಪರೀಕ್ಷಾ ಶುಲ್ಕ ಕಟ್ಟಲು ಹೋದ ವಿದ್ಯಾರ್ಥಿಗಳು ವಿಜಯ ತಂದೆ ಉಮೇಶ ಪಾಂಚಾಳ ಇವರ ಹತ್ತಿರ ಕಳೆದ ವರ್ಷ ಒಂದು ಸಾವಿರ ರೂಪಾಯಿ ತೆಗೆದುಕೊಂಡು ಅವನಿಗೆ ಪರೀಕ್ಷಾ ಪ್ರವೇಶ ಪತ್ರ ನೀಡಿರುವುದಿಲ್ಲ, ಈ ಹುಡುಗನ ತಂದೆ ಇಲ್ಲ ತಾಯಿ ಕೂಡಾ ವಿಶೇಷಚೇತನರಾಗಿದ್ದು ಇವರು ತುಂಬಾ ಬಡತನದಿಂದ ಜೀವನ ನಡೆಸುತ್ತಿದ್ದಾರೆ ಇಂತಹದರಲ್ಲಿ ಒಂದು ಸಾವಿರ ರೂಪಾಯಿ ಕೊಟ್ಟರೂ ಕೂಡಾ ಪರೀಕ್ಷೆ ಬರೆಯಲು ಬಿಡಲಿಲ್ಲ ಇಂತಹ ಮುಖ್ಯ ಗುರುಗಳನ್ನು ಇನ್ನೂ ಶಾಲೆಯಲ್ಲಿ ಇಡಬೇಕಾ ? ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರಶ್ನೆಯಾಗಿದೆ.
ಈ ಸಂಧರ್ಭದಲ್ಲಿ ಬಿಎಸ್‌ಪಿ ತಾಲೂಕು ಅಧ್ಯಕ್ಷರಾದ ಶಂಕರ ಫುಲೆ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಬಂದು ವಿದ್ಯಾರ್ಥಿಗಳ ಪರಿಸ್ಥಿತಿ ಕುರಿತು ಮಾಹಿತಿ ನೀಡಿ ವಿದ್ಯಾರ್ಥಿಗಳೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪತ್ರದ ಮೂಲಕ ದೂರು ಸಲ್ಲಿಸಿದ್ದಾರೆ.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!