ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಧಿಕಾರಿಗಳು, ಪಿ ಆರ್ ಗಳು ಮಾಡಿದ ಎಡವಟ್ಟಿನಿಂದ ರೈತರ ಪರದಾಟ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನಲ್ಲಿ ಬರುವ ರೈತರು ಬೆಳೆದ ಬೆಳೆಗಳ ಬೆಳೆ ಸಮೀಕ್ಷೆದಾರರು ತಪ್ಪಾಗಿ ಸಮೀಕ್ಷೆ ಮಾಡುವುದರಿಂದ ಹೆಸರು, ಉದ್ದು ನೋಂದಣಿ ಮಾಡಿಕೊಳ್ಳಲು ಪರದಾಡುವಂತಾಗಿದ್ದು ಕೂಡಲೇ ಈ ಸಮಸ್ಯೆ ಬಗೆಹರಿಸಬೇಕೆಂದು ಕಾಳಗಿ ತಾಲೂಕಿನ ರೈತರು ಆಗ್ರಹಿಸಿದ್ದಾರೆ. ಭೂಮಿ ವಿವರ ನೀಡುವ ಪಹಣಿಗೆ ಬೆಳೆ ವಿಮೆ ನಮೂದಿಸುವಲ್ಲಿ ಅಧಿಕಾರಿಗಳು ಪಿ ಆರ್ ಗಳು ಎಡವಟ್ಟಿನಿಂದ ಬೆಳೆಯ ಬೆಂಬಲ ಬಲೆಗೆ ಕತ್ರಿ ಬೀಳುತ್ತಿದೆ, ಹೀಗಾಗಿ ಬೆಂಬಲ ಬೆಲೆಯಲ್ಲಿ ಹೆಸರು, ಉದ್ದು, ಸೋಯಾ, ಖರೀದಿ ಕೇಂದ್ರದವರಿಗೆ ಪಹಣಿ, ಬೆಳೆಗೆ ಹೊಂದಾಣಿಕೆ ಆಗದ ಕಾರಣಕ್ಕೆ ಬೆಳೆ ಹೆಸರು ಉದ್ದು ಸೋಯಾ ಫಸಲು ತೆಗೆದುಕೊಳ್ಳಲು ನಿರಾಕರಿಸುತ್ತಿದ್ದಾರೆ ಇದರಿಂದ ರೈತರು ಬೆಳೆಗೆ ಬೆಂಬಲ ಸಿಗದೆ ಕಡಿಮೆ ಬೆಲೆಗೆ ದಲ್ಲಾಳಿಗಳಿಗೆ ಮಾರಾಟ ಮಾಡುವ ಪರಿಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಪಸ್ವಲ್ಪ ಬೆಳೆದ ಹೆಸರು ಉದ್ದು ಸೋಯಾ ಮಾರುಕಟ್ಟೆಯಲ್ಲಿ ಕಡಿಮೆ ದರದಲ್ಲಿ ಇರುವುದರಿಂದ ರೈತರು ಬೆಂಬಲ ಬೆಲೆಗೆ ಹಾಕಲು ನೊಂದಣಿ ಮಾಡಿಸಲು ಬಂದಾಗ ಸಮಸ್ಯೆ ಆಗುತ್ತಿದೆ. ಈ ಸಮಸ್ಯೆ ಬಗೆಹರಿಸಬೇಕು ಬೆಂಬಲ ಬೆಲೆಯಲ್ಲಿ ಬೆಳೆಗಳನ್ನು ನೋಂದಾವಣೆ ಮಾಡಲು ರೈತರಿಗೆ ಬಯೋಮೆಟ್ರಿಕ್ ಕಡ್ಡಾಯ ಆಗಿರುವುದರಿಂದ ಹಿರಿಯ ನಾಗರಿಕರ ಬಯೋಮೆಟ್ರಿಕ್ ಆಗುತ್ತಿಲ್ಲ ಇವೆಲ್ಲಾ ಅಂಶಗಳನ್ನು ಪರಿಗಣಿಸಿ ಇದಕ್ಕೆ ಪರ್ಯಾಯ ಮಾರ್ಗ ಒದಗಿಸಬೇಕೆಂದು ಮಾನ್ಯ ತಹಶೀಲ್ದಾರ್ ಕಾಳಗಿ ರವರಿಗೆ ರೈತರು ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ವೀರಣ್ಣ ಗಂಗಾಣಿ ರೈತ ಸಂಘ ತಾಲೂಕ ಅಧ್ಯಕ್ಷರು ಕಾಳಗಿ, ಜಗನ್ನಾಥ್ ಸ್ವಾಮಿ ಸಾಲಹಳ್ಳಿ ಕಲ್ಲಪ್ಪ ಹಿರೇಗೌಡ ಜಂಬಗಾ, ಲೋಕೇಶ್ ಹೊಡೆದ ಸಾಲಹಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ ಚಂದ್ರಶೇಖರ್ ಆರ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!