ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ಓಂ ಶ್ರೀ ಗುರು ಹಾಸ್ಪಿಟಲ್ ಮತ್ತು ಜೈ ಕನ್ನಡಿಗರ ಸೇನೆ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತವಾಗಿ ಉಚಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ರಕ್ತದಾನದ ಮಹತ್ವದ ಕುರಿತು ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು ಒಂದು ಬಾರಿ ಒಬ್ಬ ವ್ಯಕ್ತಿ ರಕ್ತದಾನ ಮಾಡಿದರೆ ಮೂರು ಜೀವಗಳನ್ನು ಆಪತ್ಕಾಲದಲ್ಲಿ ಉಳಿಸಬಹುದು ಅದೇ ರೀತಿಯಾಗಿ ವರ್ಷದಲ್ಲಿ ಒಬ್ಬ ವ್ಯಕ್ತಿ ಎರಡು ಬಾರಿ ಮಾಡಿದರೆ ಹೃದಯಾಘಾತದ ತೊಂದರೆಯಿಂದ ಪಾರಾಗಬಹುದು ಹಾಗೂ ಬೊಜ್ಜಿನ ಸಮಸ್ಯೆಯಿಂದ ಬಳಲುವವರು ವರ್ಷದಲ್ಲಿ ಎರಡು ಬಾರಿ ರಕ್ತದಾನ ಮಾಡಿದರೆ ಆರೋಗ್ಯಕರ ಜೀವನ ನಡೆಸಬಹುದು ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು. ಈ ಸಂದರ್ಭದಲ್ಲಿ ಡಾ. ಬಸನಗೌಡ ಪಾಟೀಲ್ , ಜೈ ಕನ್ನಡಿಗರ ಸೇನೆಯ ಯಡ್ರಾಮಿ ತಾಲೂಕ ಅಧ್ಯಕ್ಷರಾದ ಭರತ್ ಎಮ್. ದೊರೆ, ಜೈ ಕನ್ನಡಿಗರ ಸೇನೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಓಂ ಶ್ರೀ ಗುರು ಹಾಸ್ಪಿಟಲನ ಸಿಬ್ಬಂದಿಯವರು ಭಾಗವಹಿಸಿದ್ದರು ಎಂದು ಜೈ ಕನ್ನಡಿಗರ ಸೇನೆಯ ತಾಲೂಕ ಅಧ್ಯಕ್ಷರಾದ ಭರತ್ ಎಂ. ದೊರೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
- ಕರುನಾಡ ಕಂದ ಪತ್ರಿಕೆ



















