ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಭಕ್ತ ಕನಕದಾಸರು

ಭಕ್ತಿ ಭಾವಕೆ ಅಜರಾಮರದ ಹೆಸರು ಕನ್ನಡ ಭಾಷೆಯ ವಿಶಿಷ್ಟವಾದ ದಾಸಶ್ರೇಷ್ಠರು
ಯುದ್ಧದಿ ಸೋತ ದಾಸ ಪರಂಪರೆಯ ಹರಿದಾಸರು
ಕಾಗಿನೆಲೆಯ ನಿವಾಸಿ ಶ್ರೀ ಭಕ್ತ ಕನಕದಾಸರು

ಹಾವೇರಿಯ ಬಾಡ ಗ್ರಾಮದ ತಿಮ್ಮಪ್ಪ ನಾಯಕ
ಚಿನ್ನದಂತ ಮಗನ ಹೆತ್ತರು ಬಚ್ಚಮ್ಮ ಭೀರಪ್ಪನಾಯಕ
ವಿಜಯನಗರ ಸಾಮ್ರಾಜ್ಯದ ಗಂಡೆದೆಯ ದಂಡನಾಯಕ
ತಿರುಪತಿ ತಿಮ್ಮಪ್ಪನ ಆಶೀರ್ವಾದದ ಕುಲದೀಪಕ

ಶ್ರೀವ್ಯಾಸರಾಯರ ಪ್ರೀತಿಯ ಮೆಚ್ಚಿನ ಶಿಷ್ಯರಾಗಿ
ಉಡುಪಿ ದೇಗುಲದಿ ಕನಕನ ಕಿಂಡಿಗೆ ಹೆಸರಾಗಿ
ಲೋಕ ಕಲ್ಯಾಣದಿ ಕೃಷ್ಣನ ಪ್ರೀತಿಯ ಭಕ್ತರಾಗಿ
ಜಾತಿ ವ್ಯವಸ್ಥೆಯ ತಿರಸ್ಕರಿಸಿದರು ಮನುಕುಲಕ್ಕಾಗಿ

ಕಾಗಿನೆಲೆ ಆದಿಕೇಶವರಾಯರ ಅಂಕಿತದಲಿ
ಕೀರ್ತನೆಗಳ ರಚಿಸಿ ಹಾಡಿದರು ಕೃಷ್ಣನ ಸ್ಮರಣೆಯಲಿ
ಮೋಹನ ತರಂಗಿಣಿ ನಳಚರಿತ್ರೆ ಕೃತಿಗಳಲಿ
ಹಲವು ವೈಶಿಷ್ಟತೆಗಳು ತಲೆಯೆತ್ತಿವೆ ಪುಟಗಳಲಿ

ಅನುದಿನ ಸತತವಾಗಿ ಶ್ರೀಕೃಷ್ಣನ ಕೀರ್ತನೆಯು
ನಾಡಿನೆಲ್ಲೆಡೆ ಹಬ್ಬಿದೆ ಕನಕದಾಸರ ಕೀರ್ತಿಯು
ಎತ್ತ ನೋಡಿದರೆತ್ತ ಸ್ಥಾಪಿಸಲಾಗಿದೆ ಅವರ ಮೂರ್ತಿಯು
ಹುಟ್ಟಿ ಬರಲಿ ಕನಕದಾಸರು ಮನೆ ಮನೆಯಲ್ಲಿಯು

  • ಶ್ರೀ ಮುತ್ತು ಯ.ವಡ್ಡರ ( ಶಿಕ್ಷಕರು )
    ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಿರೇಮಳಗಾವಿ
    ಬಾಗಲಕೋಟೆ.
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!