ಬಾಗಲಕೋಟೆ : ಬೆಂಕಿ, ಅಪಾಯಕಾರಿ ವಸ್ತುಗಳು, ಮತ್ತು ಇತರೆ ತುರ್ತು ಪರಿಸ್ಥಿಗಳಲ್ಲಿ ತಮ್ಮ ಜೀವನದ ಹಂಗು ತೊರೆದು ಕಾರ್ಯ ನಿರ್ವಹಿಸುವ ವೀರರನ್ನು ಹೊಂದಿರುವ ಸಂಸ್ಥೆ ಅಗ್ನಿಶಾಮಕದಳ ಸಂಸ್ಥೆಯಾಗಿದ್ದು ಇವರಿಂದ ಆಪತ್ಕಾಲದಲ್ಲಿ ಉಂಟಾಗುವ ಪ್ರಾಣಹಾನಿ,ಆಸ್ತಿ ಪಾಸ್ತಿ, ನಷ್ಟ ಕಡಿಮೆಯಾಗುತ್ತವೆ, ನಾವು ಕೂಡಾ ಇವರ ಸಲಹೆಗಳನ್ನು ತಿಳಿದುಕೊಂಡು ಆಗುವ ಅನಾಹುತಗಳನ್ನು ಆದಷ್ಟು ಪ್ರಯತ್ನಿಸಿ ತಪ್ಪಿಸಬೇಕು ಎಂದು ವಿಶ್ವ ಚೇತನ ಪಬ್ಲಿಕ್ ಸ್ಕೂಲ್ ಕಂದಗಲ್ಲನ ಸಂಸ್ಥೆಯ ಸಂಸ್ಥಾಪಕರು, ಈ ಸಾಲಿನ ತಾಲೂಕು ಕನ್ನಡ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತರಾದ ಸಂಗಣ್ಣ ಹವಲ್ದಾರ ಹೇಳಿದರು. ಜಿಲ್ಲೆಯ ಇಳಕಲ್ ತಾಲೂಕಿನ ಕಂದಗಲ್ ಗ್ರಾಮದ “ಗುರುಮಹಾಂತ ರಂಗಮಂದಿರ ಮತ್ತು ಶಾಲೆಯ ಆವರಣದಲ್ಲಿ ” ಅಗ್ನಿ ಶಾಮಕ ಇಲಾಖೆಯಿಂದ ಅಗ್ನಿ ಅವಘಡದ ಮುಂಜಾಗ್ರತಾ ಕ್ರಮದ ಉಪನ್ಯಾಸ ಮತ್ತು ಅಣಕು ಪ್ರದರ್ಶನ ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬೆಂಕಿ ಅವಘಡದ ಕುರಿತು ವಿಶೇಷ ಉಪನ್ಯಾಸವನ್ನು ಅಗ್ನಿ ಶಾಮಕದಳದ ಅಧಿಕಾರಿ ಜಗದೀಶ ಗಿರಡ್ಡಿ ಅವರು ಅಣುಕು ಪ್ರದರ್ಶನ ಮಾಡುವದರ ಮುಖಾಂತರ ನೀಡಿದರು. ಅಧಿಕಾರಿಗಳಾದ ಮಾರುತಿ ಜಾದವ್ , ಖಾಜೇಸಾಬ ಗುಂತಗುಳಿ, ಮಲ್ಲೇಶ ಡಂಬಳ, ದಯಾನಂದ ಹಡಪದ, ಉಪಸ್ಥಿತರಿದ್ದರು. ಗ್ರಾಮದ ನಿವೃತ್ತ ಶಿಕ್ಷಕ ಶೇಖರಪ್ಪ ಭೋವಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಮುಖ್ಯ ಗುರುಮಾತೆ ರೇಷ್ಮಾ ಗಾವಡಿ ಸೇರಿದಂತೆ ಗ್ರಾಮದ ವಿವಿಧ ಶಾಲೆಯ ಶಿಕ್ಷಕವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಗುರುಮಾತೆ ಕು.ಭವ್ಯಶ್ರೀ ಭಂಡಾರಿ, ಸ್ವಾಗತ ಭಾಷಣವನ್ನು ಗುರುಮಾತೆ ಶ್ವೇತಾ ತುಂಬದ, ವಂದನಾರ್ಪಣೆಯನ್ನುಕು ಪ್ರಸಾದ ನಾಯಕ ಮಾಡಿದರು. ಕಾರ್ಯಕ್ರಮದ ಕೇಂದ್ರ ಬಿಂದುವಾದ ಅಣಕು ಪ್ರದರ್ಶನವು ಆಕರ್ಷಣೀಯ ಮತ್ತು ಕುತೂಹಲಕಾರಿಯಾಗಿತ್ತು. ಶಾಲೆಯ ಎಲ್ಲಾ ಶಿಕ್ಷಕವೃಂದ, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು, ಪಾಲಕವೃಂದ, ಆಡಳಿತ ಮಂಡಳಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
- ಕರುನಾಡ ಕಂದ ಪತ್ರಿಕೆ



















