ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿದ್ಯೆಯಿಂದ ಸಮೃದ್ದಿ :ಜಗದ್ಗುರು ಚಂದ್ರಶೇಖರ ಮಹಾಸ್ವಾಮಿಗಳು ಹಕ್ಕಿಹೂಂಡ

ಆಶೀರ್ವಚನ ನೀಡುತ್ತಿರುವ ಹುಬ್ಬಳ್ಳಿ ಹೊಸೂರ ನ ಚಂದ್ರಶೇಖರ ಮಹಾಸ್ವಾಮಿಗಳು.

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದ ವಿಶ್ವ ಚೇತನ ಪಬ್ಲಿಕ್ ಸ್ಕೂಲ್ ಶಾಲೆಯ ” ಗುರುಮಹಾಂತ ರಂಗಮಂದಿರ ” ದಲ್ಲಿ ಶ್ರೀ ಗಳ ಆಶೀರ್ವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪಂಡಿತರು ವಾಗ್ಮಿಗಳು ಹತ್ತಾರು ಭಾಷೆಗಳನ್ನು ಕರಗತ ಮಾಡಿಕೊಂಡು ಹಲವಾರು ರಾಷ್ಟ್ರಗಳನ್ನು ಸುತ್ತಿರುವ ಪರಮಪೂಜ್ಯ ಜಗದ್ಗುರುಗಳಾದ ಪೂಜ್ಯಶ್ರೀ ಚಂದ್ರಶೇಖರ ಮಹಾಸ್ವಾಮಿಗಳು ಅಕ್ಕಿಹೊಂಡ, ಹೊಸೂರು, ಹುಬ್ಬಳ್ಳಿ ಇವರು ವಹಿಸಿ ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಯನ್ನು ವಿದ್ಯೆ ಕಳಿಸಿದ ಗುರುಗಳನ್ನು ಸದಾ ಸ್ಮರಿಸುತ್ತಿರಬೇಕು ಅವರಿಗೆ ಗೌರವ ನೀಡಬೇಕು ಸದಾಕಾಲ ಅವರ ಸೇವೆಯೊಂದಿಗೆ ನಿಮ್ಮ ಜೀವನವನ್ನು ಸಾರ್ಥಕಪಡಿಸಿಕೊಳ್ಳುವುದರ ಜೊತೆಗೆ ಉತ್ತಮ ವಿದ್ಯೆ ಹೊಂದಿ ನಮ್ಮ ದೇಶದ ಉತ್ತಮ ಪ್ರಜೆಗಳಾಗಬೇಕು, ವಿದ್ಯೆಯಿಂದ ಜೀವನ ಸಮೃದ್ದಿ ಇದ್ದು ಅದನ್ನು ಉಪಯೋಗಿಸಿಕೊಳ್ಳಬೇಕು ಎಂದು ಆಶೀರ್ವಚನ ನೀಡಿದರು. ಶಾಲೆಯ ಸಂಸ್ಥಾಪಕರಾದ ಸಂಗಣ್ಣ ಎಸ್ ಹವಾಲ್ದಾರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀಗಳ ಪಾದಪೂಜೆಯನ್ನು ಕು. ಆದರ್ಶ ಹವಾಲ್ದಾರ್ ನೆರವೇರಿಸಿ ಆಶೀರ್ವಾದ ಪಡೆದರು. ಕಾರ್ಯಕ್ರಮದ ನಿರೂಪಣೆ ಗುರುಮಾತೆ ಕು. ಭವ್ಯಶ್ರೀ ಭಂಡಾರಿ. ಸ್ವಾಗತ ಗುರುಗಳಾದ ಕು. ಅಜಯ್ ಹೆಚ್. ವಂದನಾರ್ಪಣೆ ಗುರುಮಾತೆ ಕು. ನಂದಿನಿ ನಾಯ್ಕ ಮಾಡಿದರು ಶಾಲೆಯ ಎಲ್ಲಾ ಶಿಕ್ಷಕವೃಂದ, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು, ಪಾಲಕವೃಂದ, ಆಡಳಿತ ಮಂಡಳಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!