ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಿಗ್ ಬಾಸ್ ಸ್ಪರ್ಧಿ ಮಲ್ಲಮ್ಮಗೆ ಅದ್ದೂರಿ ಸ್ವಾಗತ

ಕಲಬುರಗಿ : ಕಲರ್ಸ್ ಕನ್ನಡ ಸಿನೆಮಾ ಚಾನಲ್ ನ ಬಾಸ್ ಸೀಜನ್ 12ರ ಸ್ಪರ್ದಿ ಮಲ್ಲಮ್ಮ ಬಾವಿರವರನ್ನು ಸುರಪುರ ತಾಲ್ಲೂಕಿನ ಸ್ವಗ್ರಾಮವಾದ ಕನ್ನೆಳ್ಳಿ ಗ್ರಾಮಸ್ಥರು ಎತ್ತಿನ ಬಂಡಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಿದರು.

ನಟ ಮನೋಜ್ ಕುಮಾರ್ ಹಾಗೂ ಸೆಲೆಬ್ರಿಟಿಸ್ ಪಲ್ಲವಿ ಲಕ್ಷ್ಮೀಕಾಂತಗೌಡ ಜೊತೆಗೆ ಮಲ್ಲಮ್ಮ ಬಾವಿಯವರನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಲಾ ಮಕ್ಕಳು ಲೇಜಿಮ್ ತಂಡದ ಜೊತೆಗೆ ಡೊಳ್ಳು ಕುಣಿತದ ತಂಡದೊಂದಿಗೆ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮಾಡಲಾಯಿತು.

ನಂತರ ಕನ್ನೆಳ್ಳಿ ಗ್ರಾಮಸ್ಥರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಆಕಾಶವಾಣಿ ಕಲಾವಿದರಾದ ವೀರೇಶ ಗವಾಯಿಗಳು ಹಾಗೂ ಮಹಾಂತೇಶ ಹೆಗ್ಗಣದೊಡ್ಡಿ ಯವರಿಂದ ಸಂಗೀತ ಕಾರ್ಯಕ್ರಮ ಜರುಗಿತು.

ಡೊಳ್ಳು ವಾಧ್ಯ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ದೇವದುರ್ಗದ ಮಲದಕಲ್ ಪೂಜ್ಯರು, ನಗನೂರು ಸೂಗೂರೇಶ್ವರ ಮಠದ ಪೂಜ್ಯರು, ಹೆಗ್ಗಣದೊಡ್ಡಿ ಧರ್ಮರ ಮಠದ ಪೂಜ್ಯರು, ಶಹಾಪುರ ಚರಬಸವೇಶ್ವರ ಗದ್ದುಗೆ ಸಂಸ್ಥಾನದ ಪೂಜ್ಯರಾದ ಶರಣು ಗದ್ದುಗೆ, ಬಂಡೆಪ್ಪನಹಳ್ಳಿ ಪೂಜ್ಯರು ಕನ್ನೆಳ್ಳಿ ಗ್ರಾಮದ ಮಲ್ಲಯ್ಯ ಮುತ್ಯಾ, ಪಂಚಯ್ಯ ಮುತ್ಯಾ, ಗೋವಿಂದ ರಾಜ ದೇವರು, ದೊಡ್ಡಪ್ಪಗೌಡ ಪೋಲಿಸ್ ಪಾಟೀಲ್, ಬಾಪುಗೌಡ ಮಾಲಿಪಾಟೀಲ್ ಸುರಪುರ ಪಿಎಸ್ಐ ಸಿದ್ದಣ್ಣ ಯಡ್ರಾಮಿ ಸೇರಿದಂತೆ ಇತರರು ವೇದಿಕೆ ಮೇಲಿದ್ದರು.

ಗ್ರಾಮದ ಪ್ರಮುಖರಾದ ನಿಂಗಣ್ಣ ಗೋಡಿಹಾಳ್ಕರ್, ಬಸವರಾಜ ನಾಯ್ಕೋಡಿ, ಮಡಿವಾಳಪ್ಪ ಕೊಂಡಗುಳಿ, ಚಂದಪ್ಪ ನಾಯ್ಕೋಡಿ, ನಾದಬ್ರಹ್ಮ ಹೆಬ್ಬಾಳ್ಕರ್, ಮಲ್ಲಣ್ಣ ಹಡಪದ, ಮಲ್ಲಿಕಾರ್ಜುನ ಕುಂಬಾರ ಸೇರಿದಂತೆ ಗ್ರಾಮದ ಹಿರಿಯರು, ಯುವಕರು, ಮಹಿಳೆಯರು ಮತ್ತು ಮಕ್ಕಳು ಇದ್ದರು.

ಸಗರನಾಡು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ಅಂಗಡಿ ನಿರೂಪಿಸಿದರು, ಮಲ್ಲು ಚಾನಕೋಟಿ ಸ್ವಾಗತಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!