ಉತ್ತರ ಕನ್ನಡ/ ಹೊನ್ನಾವರ: 2022 ರಂದು ಪಟ್ಟಣದ ಹೃದಯ ಭಾಗದಲ್ಲಿರುವ ಬಸ್ ನಿಲ್ದಾಣ ಹಾಗೂ ಕಿಂತಾಲಕೇರಿ ಮಾರ್ಗವಾಗಿ ಹಾದುಹೋಗಿರುವ ಸಿಮೆಂಟ್ ರಸ್ತೆ ವಾಹನ ಸವಾರಿಗೆ ಅಪಾಯಕ್ಕೆ ಅಹ್ವಾನ ನೀಡುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು ಎಂದು ಕರುನಾಡ ವಿಜಯ ಸೇನೆ ಸಂಘಟಕರು ಹಾಗೂ ಸಾರ್ವಜನಿಕರು ಹಲವು ಬಾರಿ ಮೌಖಿಕವಾಗಿ ಹಾಗೂ ಮನವಿಮೂಲಕ ಮೂಲಕ ಎಚ್ಚರಿಕೆ ನೀಡಿದರು. ಅಧಿಕಾರಿಗಳು ಉಡಾಫೆ ಆಗಿ ವರ್ತಿಸುತ್ತಿದ್ದಾರೆ ಎಂದು ಕರುನಾಡ ವಿಜಯ ಸೇನೆ ಸಂಘಟಕರು ಹಾಗೂ ಸಾರ್ವಜನಿಕರು ಆರೋಪಿಸಿದ್ದಾರೆ ಹಲವು ಬಾರಿ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಜಾಗ ಪರಿಶೀಲನೆ ಮಾಡಿ ಹೋದರು ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಕಳೆದ ಎರಡು ಮೂರು ತಿಂಗಳಿಂದ ಅನೇಕ ಬೈಕ್ ಸವಾರರು ಪಾದಾಚಾರಿಗಳು ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದರು ಸಹ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಪ್ರಾಣ ಹಾನಿಯಾದರು ಸಂಪೂರ್ಣವಾಗಿ ತಾಲೂಕು ಆಡಳಿತ ಅಧಿಕಾರಿಗಳು ಪಟ್ಟಣ ಪಂಚಾಯತ್ ಅಧಿಕಾರಿಗಳು ನೇರ ಹೊಣೆಯಾಗಿರುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ವರದಿ ವಿನಾಯಕ ಆಚಾರಿ



















