ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೆಸಿಐ ಕಂಪ್ಲಿ ಸೋನಾ ಘಟಕದ ನೂತನ ಅಧ್ಯಕ್ಷರಾಗಿ ಡಾ.ಭರತ್ ಪದ್ಮಶಾಲಿ ಅವಿರೋಧ ಆಯ್ಕೆ

ಬಳ್ಳಾರಿ / ಕಂಪ್ಲಿ : ಕಳೆದ ಹಲವು ದಶಕಗಳಿಂದ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಜೆಸಿಐ ಭಾರತದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿರುವ ಪ್ರತಿಷ್ಠಿತ ಜೆಸಿಐ ಕಂಪ್ಲಿ ಸೋನಾ ಘಟಕದ ನೂತನ ಅಧ್ಯಕ್ಷರಾಗಿ ಡಾ.ಭರತ್ ಪದ್ಮಶಾಲಿ ಅವಿರೋಧವಾಗಿ ಆಯ್ಕೆಯಾದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಜೆಸಿಐ ಕಂಪ್ಲಿ ಸೋನಾ ಘಟಕದ ಪದಾಧಿಕಾರಿಗಳು, ಜೆ ಸಿ ಐ ಸಂಸ್ಥೆಯ ಹಿರಿಯ ಸದಸ್ಯರ ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಿ ನೂತ ಅಧ್ಯಕ್ಷರನ್ನಾಗಿ ಡಾ.ಭರತ್ ಪದ್ಮಶಾಲಿಯವರನ್ನು ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷ ಜೆ.ಸಿ. ಡಾ.ಭರತ್ ಪದ್ಮಶಾಲಿ ಮಾತನಾಡಿ ಶೀಘ್ರದಲ್ಲಿ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಪದಗ್ರಹಣ ಸಮಾರಂಭವನ್ನು ಪಟ್ಟಣದಲ್ಲಿ ಏರ್ಪಡಿಸಲಾಗುವುದು ಎಂದರಲ್ಲದೆ, ಯುವಜನತೆಯಲ್ಲಿ ಗುಣಾತ್ಮಕ ಬದಲಾವಣೆ ಸೃಷ್ಟಿಸಿ ಸದೃಢಗೊಲಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು, ಯುವಜನತೆಯಲ್ಲಿ ಅಭಿವೃದ್ಧಿಯ ಅವಕಾಶಗಳನ್ನು ಒದಗಿಸುವ , ತರಬೇತಿಯನ್ನು ನೀಡುವುದು ಜೆಸಿಐನ ಮೂಲ ಉದ್ದೇಶವಾಗಿದ್ದು, ಇದನ್ನು ಈಡೇರಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು. ಕಂಪ್ಲಿ ಸೋನಾದ ಎಲ್ಲಾ ಪದಾಧಿಕಾರಿಗಳನ್ನು, ಹಿರಿಯ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ವರ್ಷವಿಡೀ ಹೆಚ್ಚು ಹೆಚ್ಚು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ವಲಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಲಾಗುವುದು ಎಂದರು. ನಂತರ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಜೆಸಿ ಡಾ.ಭರತ್ ಪದ್ಮಶಾಲಿಯವರನ್ನು ಆತ್ಮೀಯವಾಗಿ ಸನ್ಮಾನಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಲಾದ ಸುಹಾಸ್ ಚಿತ್ರಗಾರ, ವಲಯಾಧಿಕಾರಿ ಬಿ.ರಸೂಲ್, ಪೂರ್ವಾಧ್ಯಕ್ಷರುಗಳಾದ ಪ್ರಸಾದ ಗಡಾದ್, ವಾಸೀಂ ಫಯಾಜ್, ಡಿ.ಮಂಜೇಶ್, ಸಂತೋಷ್ ಕೊಟ್ರಪ್ಪ ಸೋಗಿ, ಎಸ್.ಕೆ.ಇಂತಿಯಾಜ್,ಡಿ.ಭರತ್, ಎಸ್.ಎಂ.ಗುರುಪ್ರಸನ್ನ, ಕೃಷ್ಣ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!