ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

2.94 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಭೂಮಿ ಪೂಜೆ.

ಹನೂರು: ತಾಲೂಕಿನ ಮಣಗಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೈರನತ್ತ ಗ್ರಾಮದಲ್ಲಿ 2 ಕೋಟಿ 94 ಲಕ್ಷ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಎಂ ಆರ್ ಮಂಜುನಾಥ್ ರವರು ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಗ್ರಾಮಸ್ಥರು ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಶಾಸಕರು ಮಾತನಾಡಿ ಜಿಲ್ಲಾ ವಿಪತ್ತು ನಿರ್ವಹಣಾ ನಿಧಿಯಿಂದ ಈ ಅನುದಾನ ಬಂದಿದ್ದು ಹಲವಾರು ಕೆಲಸಗಳು ಇದ್ದರೂ ಈ ಸೇತುವೆ ನಿರ್ಮಾಣ ಮಾಡಿದರೆ ಗ್ರಾಮಸ್ಥರಿಗೆ ಅನುಕೂಲ ಆಗುತ್ತದೆ ಎಂಬುದನ್ನು ಮನದಲ್ಲಿಟ್ಟುಕೊಂಡು ಈ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿಲಾಗಿದೆ ಎಂದರು ನಂತರ ಮಾತನಾಡಿದ ಅವರು ನಮ್ಮ ಜಿಲ್ಲಾಧಿಕಾರಿಯವರು ಈ ಅನುದಾನ ನೀಡಿರುವುದಕ್ಕೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಗುತ್ತಿಗೆದಾರನಿಗೆ ಶಾಸಕರಿಂದ ಖಡಕ್ ಆದೇಶ :
ಸೇತುವೆ ಕಾಮಗಾರಿಯು ಗುಣಮಟ್ಟದಿಂದ ಕೂಡಿರಬೇಕು ಕಾಮಗಾರಿ ನಡೆಯುವ ಜಿ ಪಿ ಎಸ್ ಫೋಟೋಗಳನ್ನು ನನಗೆ ಕಳುಹಿಸಬೇಕೆಂದು ಗುತ್ತಿಗೆದಾರನಿಗೆ ಖಡಕ್ ಆದೇಶ ನೀಡಿ, ಕಾಮಗಾರಿ ನಡೆಯುವ ವೇಳೆಯಲ್ಲಿ ಸ್ಥಳೀಯರು ನಿಂತು ಅಚ್ಚು ಕಟ್ಟಾಗಿ ಕಾಮಗಾರಿ ಮಾಡಿಸಿಕೊಳ್ಳಿ ಏನೇ ಸಮಸ್ಯೆಯಾದರೂ ನನ್ನ ಗಮನಕ್ಕೆ ತನ್ನಿ, ಗ್ರಾಮದಲ್ಲಿ ಇನ್ನು ರಸ್ತೆ ಚರಂಡಿ ಇನ್ನಿತರ ಸಮುದಾಯದ ಕಾಮಗಾರಿಗಳು ಆಗಬೇಕಿದೆ ಹಂತ ಹಂತವಾಗಿ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಣಗಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸೋಮಶೇಖರ್ , ಶಾಗ್ಯ ಬಾಬಣ್ಣ, ಎ ಇ ಇ ಕುಮಾರ್,ಗ್ರಾಮಸ್ಥರಾದ ಲೋಕೇಶ್,ಮಧು, ರಾಚಪ್ಪ, ನಿಂಗರಾಜು, ಶಾಗ್ಯ ಬಾಬು ಸೇರಿದಂತೆ ಗ್ರಾಮಸ್ಥರು ಯುವಕರು ಇದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!