
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಸಿಲೆಂಡರ್ ಸ್ಫೋಟಗೊಂಡು ಒಂಬತ್ತು ಜನರು ಗಂಭೀರ ಗಾಯಗೊಂಡಿದ್ದಾರೆ.
ಹೆಬ್ಬಾಳ ಗ್ರಾಮದ ದುರುಗಮ್ಮ ,ಹುಲಿಗೆಮ್ಮ ಕುಟುಂಬದವರು ಹಾಗೂ ಅಕ್ಕಪಕ್ಕದ ಮನೆಯವರಾದ ರಾಜೇಶ, ಸುರೇಶ , ದುರಗಪ್ಪ , ಗೌರಮ್ಮ , ವಿಷ್ಣು , ನಾಗರಾಜ, ಶ್ರೀಕಾಂತ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು ಗಂಗಾವತಿ ಸರಕಾರಿ ಆಸ್ಪತ್ರೆಗೆ ಸ್ಥಳೀಯರ ಸಹಾಯದಿಂದ ದಾಖಲು ಮಾಡಲಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಹೆಚ್ಚಿನ ಚಿಕಿತ್ಸೆಗೆಂದು ಬಳ್ಳಾರಿ ಓ ಪಿ ಡಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.
ಗ್ರಾಮದ ಹಿರಿಯರು ತಾಲೂಕ ಪಂಚಾಯಿತಿ ಮಾಜಿ ಸದಸ್ಯರಾದ ಪಕೀರಪ್ಪ , ಗ್ರಾಮದ ಮುಖಂಡರಾದ ಚಿದಾನಂದಪ್ಪ , ಮಲ್ಲನಗೌಡ , ಅಯ್ಯಪ್ಪ , ಕೃಷ್ಣ ವೀರೇಶಗೌಡ , ರಾಘವೇಂದ್ರ ಪಾತಪ್ಪ ಕಂಚಿ , ಶಿವಣ್ಣ ,ಹುಸೇನ್ ಬಾಷಾ, ಹೆಬ್ಬಾಳದ ರೈತ ಸಂಘದ ಜಿಲ್ಲಾ ಅಧ್ಯಕ್ಷರು ದೊಡ್ಡ ಬರಮಣ್ಣ ಸ್ಥಳಕ್ಕೆ ಭೇಟಿ ನೀಡಿದರು.
ಗ್ರಾಮದ ಹಿರಿಯರಾದ ಚಿದಾನಂದಪ್ಪ ಮಾತನಾಡಿ ಹೆಬ್ಬಾಳ ಗ್ರಾಮದಲ್ಲಿ ಸಿಲೆಂಡರ್ ಸ್ಪೋಟ ಆಗಿ ಒಂಭತ್ತು ಜನರಿಗೆ ಗಂಭೀರ ಗಾಯಗಳಾಗಿದ್ದು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ . ದುರ್ಘಟನೆ ಕುರಿತು ಡಣಾಪೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಿಲೇಜ ಅಕೌಂಟೆಂಟ್ ಅವರ ಮೂಲಕ ತಹಶೀಲ್ದಾರರು ಹಾಗೂ ಜಿಲ್ಲಾಧಿಕಾರಿಯವರು ಸೂಕ್ತ ಪರಿಹಾರ ನೀಡಬೇಕೆಂದು ಸಾರ್ವಜನಿಕರ ಮನವಿ ಮಾಡಿಕೊಂಡಿದ್ದಾರೆ.
ವರದಿ ಹನುಮೇಶ ಭಾವಿಕಟ್ಟಿ




















