ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಆಕಾಶ ಜೆ. ಶಿಂಧೆಗೆ ‘ಕರ್ನಾಟಕ ರಾಜ್ಯೋತ್ಸವ ರತ್ನ’ ಪ್ರಶಸ್ತಿ

ಬೀದರ್: ನಗರದ ಪೂಜ್ಯ ಡಾ. ಚನ್ನಬಸವಪಟ್ಟದೇವರ ಜಿಲ್ಲಾ ರಂಗಮಂದಿರದಲ್ಲಿ ವಿಶ್ವ ಕನ್ನಡಿಗರ ಸಂಸ್ಥೆ ಹಾಗೂ ವೀರ ಕನ್ನಡಿಗರ ಸೇನೆಯ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ರಾಜ್ಯಮಟ್ಟದ ಗೌರವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಸಮಾಜ ಸೇವೆ ಕ್ಷೇತ್ರದಲ್ಲಿ ನೀಡುತ್ತಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಶ್ರೀ ಆಕಾಶ ಶಿಂಧೆ ಅವರಿಗೆ ‘ಕರ್ನಾಟಕ ರಾಜ್ಯೋತ್ಸವ ರತ್ನ ಪ್ರಶಸ್ತಿ’ ನೀಡಿ ಸನ್ಮಾನಿಸಲಾಯಿತು.

ಕಾರ್ಮಿಕ ಜೀವನದ ಮಹತ್ವವನ್ನು ಪ್ರತಿಪಾದಿಸುವ ಕಾರ್ಯಕ್ರಮದಲ್ಲಿ, ಕಾರ್ಮಿಕರು ಪ್ರತಿಯೊಂದು ನಿರ್ಮಾಣದ ಪ್ರಾಣವಾಗಿದ್ದು, ಸಮಾಜದ ಶ್ರಮಜೀವನದ ಬೆನ್ನೆಲುಬು ಎಂಬ ಸಂದೇಶ ನೀಡಲಾಯಿತು. ಕೃಷಿ, ಹೈನುಗಾರಿಕೆ, ಪಶುಪಾಲನೆ ಹಾಗೂ ಸಂಘಟನಾ ಚಟುವಟಿಕೆಗಳ ಮೂಲಕ ದೇಶ-ನಾಡಿಗಾಗಿ ಸೇವೆ ಸಲ್ಲಿಸುವ ಮಹಾನ್ ವ್ಯಕ್ತಿಗಳ ಶ್ರಮವನ್ನು ಸ್ಮರಿಸಲಾಯಿತು.

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಡಾ. ವಿಶ್ವನಾಥ್ ಜಿ.ಪಿ. (ರಾಜ್ಯಾಧ್ಯಕ್ಷರು, ಪ್ರ. ಶ್. ಸ., ಬೆಂಗಳೂರು), ಶ್ರೀ ಅಮೃತ ಪಾಟೀಲ್ ಸಿರನೂರ್ (ರಾಜ್ಯಾಧ್ಯಕ್ಷರು, ವೀ.ಕ್.ಸೇ., ಕಲಬುರಗಿ), ಡಾ. ಸುಬ್ಬಣ್ಣ ಕರಕನಳ್ಳಿ (ರಾಜ್ಯ ಸಂಚಾಲಕರು, ವೀ.ಕ್.ಸೇ., ಬೀದರ್), ಶ್ರೀ ಚಂದ್ರಕಾಂತ್ ದೇವಕೆ (ರಾಜ್ಯ ಸಂಘಟನಾ ಕಾರ್ಯದರ್ಶಿ, ವೀ.ಕ.ಸೇ., ಬೆಂಗಳೂರು), ಶ್ರೀ ಮುಕೇಶ್ ಶಹಾಗಂಜ್ (ಜಿಲ್ಲಾಧ್ಯಕ್ಷರು, ವೀ. ಕ. ಸೇ.), ಶ್ರೀ ಬಸರಾಜ್ ಜಡ್ಗೆ (ಜಿಲ್ಲಾ ಉಪಾಧ್ಯಕ್ಷರು) ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

ವರದಿ: ಸಾಗರ ಪಡಸಲೆ, ಬೀದರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!