ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಭ್ರಮದ ಎಳ್ಳು ಅಮಾವಾಸ್ಯೆ ಆಚರಣೆ

ಎಳ್ಳು ಅಮಾವಾಸ್ಯೆ ಅಂಗವಾಗಿ ಇಲ್ಲಿಯ ರೈತರು ಭೂತಾಯಿಗೆ ಪೊಜಿ ಸಲ್ಲಿಸಿ ನೈವೇದ್ಯ ಅರ್ಪಿಸಿ ಸಂಭ್ರಮದಿಂದ ಚರಗ ಚಲಿದರು.

ಉತ್ತರ ಕರ್ನಾಟಕದ ಅದರಲ್ಲೂ ಗದಗ ಜಿಲ್ಲಾ ಗದಗ ತಾಲೂಕಿನ ತಿಮ್ಮಾಪೂರ ಹರ್ಲಾಪೂರ, ಲಕ್ಕುಂಡಿ, ಹಾತಲಗೇರಿ ಗ್ರಾಮದ ರೈತರು ಹಿಂಗಾರು ಹಂಗಾಮಿನಲ್ಲಿ ಬೆಳೆದಿರುವ ಕಡಲೆ ಗೋಧಿ ಜೋಳದ ಬೆಳೆಗಳಿಗೆ ಪೂಜೆ ಸಲ್ಲಿಸಿದರು.

ರೈತರು ಕುಟುಂಬ ಪರಿವಾರ ಸಮೇತರಾಗಿ ಜಮೀನಿನ ಬೆಳೆಯ ಮಧ್ಯೆ ಇರುವ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು.

ಐದು ಕಲ್ಲುಗಳನ್ನು ಇಟ್ಟು ಅವುಗಳನ್ನೂ ಪಾಂಡವರು ಹಾಗೂ ಇನ್ನೊಂದು ಕಲ್ಲನ್ನು ಕಳ್ಳನೆಂದು ಭಾವಿಸಿ ಪೂಜ್ಯ ಸಲ್ಲಿಸಿ ದೇವರಿಗೆ ಉಡಿ ತುಂಬಿ ನೈವೇದ್ಯವನ್ನು ಬೆಳೆಯಲ್ಲಿ ಎರಚುತ್ತಾ ಹುಲ್ಲಿಲೋಗೂ ಚಲಮುರಿಗೊ ಎಂದು ಭೂ ತಾಯಿಗೆ ಉಣಬಡಿಸಿದರು.
ನಂತರ ಬಂಧು ಬಾಂಧವರೆಲ್ಲರು ಸೇರಿ ಜೋಳದ ರೊಟ್ಟಿ ಸಜ್ಜಿ ರೊಟ್ಟಿ ಬದನೆಕಾಯಿ ಪಲ್ಯ ವಿವಿಧ ಕಾಳು ಪಲ್ಯ ಕರಿಗಡಬು, ಶೇಂಗಾ ಹೋಳಿಗೆ ಎಳ್ಳು ಹೋಳಿಗೆ ತುಪ್ಪ ಕರಿದ ಮೇಣಸಿನಕಾಯಿ, ಸೆಂಡಿಗಿ ಉಪ್ಪಿನಕಾಯಿ ಸೇರಿದಂತೆ ವಿವಿಧ ಖಾದ್ಯಗಳ ಸಹ ಭೋಜನ ಸವಿದರು.

ಕರ್ನಾಟಕ ರಾಜ್ಯ ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್ ಬಾಬರಿ ತಮ್ಮ ಜಮೀನಿನಲ್ಲಿ ಕುಟುಂಬ ಸಮೇತರಾಗಿ ಭೂರಮಗೆ ಬಾಗಿನ ಅರ್ಪಿಸಿ ರಾಜ್ಯದಲ್ಲಿ ರೈತ ಬೆಳೆದ ಎಲ್ಲಾ ಬೆಳೆಗಳು ಹುಲುಸಾಗಿ ಬೆಳೆದು ಉತ್ತಮ ಇಳುವರಿ ಬರಲಿ ಎಂದು ಪ್ರಾರ್ಥಿಸಿದರು.

  • ಕರುನಾಡ ಕಂದ ಪತ್ರಿಕೆ.
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!