ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಹಾಕಿಸಿ : ಉಪ್ಪಾರ ನಾಗರಾಜ

ಕಂಪ್ಲಿ: ದೇಶವನ್ನು ಪೋಲಿಯೊ ಮುಕ್ತವಾಗಿಸುವುದು ನಮ್ಮೆಲರ ಜವಾಬ್ದಾರಿಯಾಗಿದೆ. ಆದ್ದರಿಂದ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಹಾಕಿಸುವಲ್ಲಿ ನಿರ್ಲಕ್ಷ್ಯವಹಿಸಬಾರದು ಎಂದು ಕಂಪ್ಲಿ ತಾಲೂಕು ಉಪ್ಪಾರ (ಭಗೀರಥ) ಸಮಾಜದ ತಾಲೂಕಾಧ್ಯಕ್ಷ ಉಪ್ಪಾರ ನಾಗರಾಜ ಹೇಳಿದರು.
ಪಟ್ಟಣದ 4ನೇ ವಾರ್ಡಿನ ಸಣಾಪುರ ರಸ್ತೆಯ ಅಂಬೇಡ್ಕರ್ ನಗರದ ನಮ್ಮ ಕ್ಲಿನಿಕ್‌ನಲ್ಲಿ ಪಲ್ಸ್ ಪೋಲಿಯೋ ದಿನದ ಅಂಗವಾಗಿ ಆರೋಗ್ಯ ಇಲಾಖೆ ಹಾಗೂ ಉಪ್ಪಾರ ಸಮಾಜ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಪೋಲಿಯೋ ಲಸಿಕೆ ಹಾಕಿ, ಮಕ್ಕಳ ತಾಯಂದಿಯರಿಗೆ ಉಚಿತವಾಗಿ ಹಣ್ಣು, ಹಂಪಲು ವಿತರಿಸಿದ ನಂತರ ಮಾತನಾಡಿ, ಪೋಲಿಯೋದಿಂದ ಉಂಟಾಗುವ ಅಂಗವಿಕಲತೆಯನ್ನು ತಡೆಗಟ್ಟಲು ಐದು ವರ್ಷದ ಒಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು. ಭಾರತವನ್ನು ಪೋಲಿಯೋ ಮುಕ್ತವನ್ನಾಗಿಸಲು ಪ್ರಾರಂಭವಾದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಿಂದಾಗಿ ದೇಶದಲ್ಲಿ ಪ್ರಗತಿ ಸಾಧಿಸಲಾಗಿದೆ. ಆದರೂ ಪೋಲಿಯೋದಿಂದ ಉಂಟಾಗುವ ಅಂಗವಿಕಲತೆಯನ್ನು ತಡೆಗಟ್ಟಲು ಮಕ್ಕಳಿಗೆ ಲಸಿಕೆ ತಪ್ಪದೇ ಹಾಕಿಸಬೇಕು ಎಂದರು.
ತಾಲೂಕು ನೋಡಲ್ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ ಮಾತನಾಡಿ, ಹಲವು ವರ್ಷಗಳ ಹಿಂದೆ ಜನರು ಪೋಲಿಯೋ ರೋಗದಿಂದ ಬಳಲುತ್ತಿದ್ದರು. ಆದರೆ, 1995ರಲ್ಲಿ ನಮ್ಮ ದೇಶದಲ್ಲಿ ಪಲ್ಸ್ ಪೋಲಿಯೋ ಆರಂಭಗೊಂಡು ಹಿನ್ನಲೆ ಈಗ ಪೋಲಿಯೋ ಪ್ರಕರಣಗಳು ಕಂಡು ಬರುತ್ತಿಲ್ಲ. ಹೀಗೆ ಮುಂದೆಯೂ ಸಹ ಪೋಲಿಯೊ ಮುಕ್ತ ಭಾರತವಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ. ದೇಶದಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಎರಡು ಹನಿ ಹಾಕಲಾಗುತ್ತಿದೆ. ಇದರಿಂದ ಮಕ್ಕಳಲ್ಲಿ ಅಂಗವಿಕಲತೆ ತಪ್ಪಿಸಬಹುದು. ಅಕ್ಕಪಕ್ಕದ ಮಕ್ಕಳಲ್ಲಿಯೂ ಸಹ ಲಸಿಕೆ ಹಾಕಿಸಬೇಕು. ಪಟ್ಟಣದಲ್ಲಿ 5490 ಹಾಗೂ ಗ್ರಾಮೀಣ ಭಾಗದಲ್ಲಿ 10061 ಮಕ್ಕಳು ಸೇರಿದಂತೆ ಒಟ್ಟಾರೆ ತಾಲೂಕಿನಲ್ಲಿ 15551 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಆದ್ದರಿಂದ ಪಟ್ಟಣದ 27 ಹಾಗೂ ಗ್ರಾಮೀಣ ಭಾಗದಲ್ಲಿ 71 ಬೂತ್‌ಗಳನ್ನು ತೆರೆಯಲಾಗಿದೆ. ಪಟ್ಟಣದಲ್ಲಿ 27 ಹಾಗೂ ಗ್ರಾಮೀಣದಲ್ಲಿ 55 ತಂಡಗಳನ್ನು ರಚಿಸಿ, ಪೋಲೀಯೋ ಯಶಸ್ವಿಗೆ ಮುಂದಾಗಿದೆ ಎಂದರು.
ಈ ಸಂದರ್ಭದಲ್ಲಿ ಟಿಎಚ್‌ಒ ಡಾ.ಅರುಣ್ ಜಿ, ವೈದ್ಯಾಧಿಕಾರಿಗಳಾದ ಡಾ.ಮಲ್ಲೇಶಪ್ಪ, ಡಾ.ಶ್ರೀನಿವಾಸ, ಉಪ್ಪಾರ ಸಮಾಜದ ಪ್ರಧಾನ ಕಾರ್ಯದರ್ಶಿ ಕೆ.ಗೋವಿಂದಪ್ಪ, ಉಪಾಧ್ಯಕ್ಷ ಉಪ್ಪಾರ ವೆಂಕಟೇಶ, ಮುಖಂಡ ಉಪ್ಪಾರ ರಾಮದಾಸ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಚನ್ನಬಸುವರಾಜ, ಪಿ.ಬಸವರಾಜ, ನಮ್ಮ ಕ್ಲಿನಿಕ್ ಸಿಬ್ಬಂದಿಗಳಾದ ನಂದಿನಿ ಕೆ, ಆರ್.ದೇವರಾಜ, ಮಹಾಲಕ್ಷ್ಮೀ ಸೇರಿದಂತೆ ಮಕ್ಕಳು ಹಾಗೂ ತಾಯಿಯಂದಿರು ಇದ್ದರು.
ಕ್ಲಿನಿಕ್‌ನಲ್ಲಿ ಮಕ್ಕಳಿಗೆ ಲಸಿಕೆ ಹಾಕುವ ಜೊತೆಗೆ ಹಣ್ಣು, ಹಂಪಲು ವಿತರಿಸಲಾಯಿತು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!