ಚಾಮರಾಜನಗರ/ಹನೂರು : ಚಿಕ್ಕಮಾಲಾಪುರ ಗ್ರಾಮ ಪಂಚಾಯತಿ ಕಾರ್ಯಾಲಯ 2024-25 ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ಹಾಗೂ 15 ನೇ ಹಣಕಾಸು ಯೋಜನೆಯ ಲೆಕ್ಕ ಪರಿಶೋಧನಾ ಸಭೆಯು ಗ್ರಾಮ ಪಂ. ಅಧ್ಯಕ್ಷೆ ಪುಷ್ಪ ಅಂಕರಾಜು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ತಾಲೂಕಿನ ಚಿಕ್ಕಮಾಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿರಗೊಡು ಗ್ರಾಮದ ಲಂಬಾಣಿ ತಾಂಡಾದಲ್ಲಿ ಹಮ್ಮಿಕೊಂಡಿದ್ದ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆಯಲ್ಲಿ ನರೇಗಾ ಯೋಜನೆಯಡಿ ಮಾಡಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ತಿಳಿಸಿ ಕೊಡಲಾಯಿತು. ಹಾಜರಿದ್ದ ಸಾರ್ವಜನಿಕರು ಸಮಸ್ಯೆಗಳು ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿ ಮಾಹಿತಿ ಪಡೆದರು.
ತಾಲೂಕು ಸಂಯೋಜಕ ನಾರಾಯಣ್ ಮಾತನಾಡುತ್ತಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಮಾರು 87 ಕಾಮಗಾರಿಗಳು ನಡೆದಿವೆ. ನಡೆದಿರುವ ಕಾಮಗಾರಿಗಳಿಗೆ 4,15,3318.00, ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಸವಿವರವಾಗಿ ಮಂಡಿಸಿದರು. ಹಾಗೂ 15 ನೇ ಹಣಕಾಸು ಯೋಜನೆಯ ಅಡಿಯಲ್ಲಿ ಮಾಡಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ತಿಳಿಸಿ ಖರ್ಚು ವೆಚ್ಚಗಳನ್ನು ಸವಿವರವಾಗಿ ಸಭೆಯಲ್ಲಿ ಮಂಡಿಸಿದರು.
ನರೇಗಾ ಯೋಜನೆ ಅಡಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡಲಾಗುತ್ತಿದ್ದು ವಸತಿ ಯೋಜನೆ, ಕುರಿ ಕೊಟ್ಟಿಗೆ. ಧನದ ಶೇಡ್, ಕೆರೆಕಟ್ಟೆ ಕಾಲುವೆ ಹೂಳೆತ್ತುವುದು ಸೇರಿದಂತೆ ಗ್ರಾಮದ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಬಹುದಾಗಿದೆ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪ ಅಂಕರಾಜು, ಸದಸ್ಯೆ ರಾಜಿಬಾಯಿ, ನೋಡಲ್ ಅಧಿಕಾರಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಿದ್ದರಾಜು, ನರೇಗಾ ಸಂಯೋಜಕ ನಾರಾಯಣ್, ಪಿ.ಡಿ.ಒ ಮಹದೇವಪ್ರಭು, ಲೆಕ್ಕ ಸಹಾಯಕ ಮಲ್ಲುಸ್ವಾಮಿ, ಮನೋಜ್, ಸಾಗರ್, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಗ್ರಾಮಸ್ಥರು, ಮಹಿಳೆಯರು ಇದ್ದರು.
ವರದಿ ಉಸ್ಮಾನ್ ಖಾನ್



















