ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೂರು ಸಲ್ಲಿಸಿದರೂ ಕ್ರಮ ಕೈಗೊಳ್ಳದ ಅಧಿಕಾರಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿಂಗಣಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಪ್ರದೀಪ ಕುಮಾರ ಮಲ್ಲಪ್ಪ ಮಾನೆ ಅವರ ಅಧಿಕಾರ ಅವಧಿಯಲ್ಲಿ 2022 – 23ನೇ ಸಾಲಿನಲ್ಲಿ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಹಿಂಗಣಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ 10 ಲಕ್ಷ ರೂಪಾಯಿ ಮೀಸಲು ಇಟ್ಟಿರುತ್ತಾರೆ. ಸದ್ಯ ಈ ಹಣವನ್ನು ಪಂಚಾಯತಿ ಕಾಂಪೌಂಡಗೆ ಬಳಕೆ ಮಾಡಿರುತ್ತಾರೆ ಸರ್ಕಾರಿ ನಿಯಮಗಳನ್ನು ಗಾಳಿಗೆ ತೋರಿರುತ್ತಾರೆ ಯಾವುದೇ ಜಾಹೀರಾತು ಹೊರಡಿಸಿಲ್ಲ ಗುತ್ತಿಗೆದಾರರ ಅಕೌಂಟಿಗೆ ಹಣ ವರ್ಗಾವಣೆ ಮಾಡಿರುವುದಿಲ್ಲ ಸರ್ಕಾರಿ ನಿಯಮ ಉಲ್ಲಂಘನೆ ಆಗಿದೆ ಎಂದು ನಾವು ದಿನಾಂಕ 4.11.2025 ರಂದು ದೂರು ಸಲ್ಲಿಸಿದೆವು ದೂರು ಸಲ್ಲಿಸಿ ಒಂದೂವರೆ ತಿಂಗಳಾದರೂ ಇಂಡಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭೀಮಾಶಂಕರ್ ಕನ್ನೂರ ಅವರು ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು
ದೂರು ಸಲ್ಲಿಸಿದವರಾದ ಲಕ್ಷ್ಮಿಕಾಂತ್ ಏಳಗಿ,
ಶಿವು ಗುಡಮಿ ,ಉಮೇಶ್ ಮಾಣಿಕಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎರಡು ದಿನದಲ್ಲಿ ಆ ಕೆಲಸದ ದಾಖಲಾತಿ ನೀಡದಿದ್ದರೆ
ತಾಲೂಕು ಪಂಚಾಯತಿಗೆ ಬೀಗ ಹಾಕಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವರದಿ ಲೋಹಿತ್ ಕುಮಾರ್ ರೂಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!