ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೆಪಿಟಿಸಿಎಲ್ ಮತ್ತು ಚೆಸ್ಕಾಂ ತಂಡಕ್ಕೆ ಅಭಿನಂದನೆಗಳ ಮಹಾಪೂರ

ಕುಸಿದ ಟವರ್ ದುರಸ್ತಿಗೊಳಿಸಿ 120 ಗ್ರಾಮಗಳಿಗೆ ಸಕಾಲದಲ್ಲಿ ವಿದ್ಯುತ್ ಪೂರೈಸಿದ ಕೆಪಿಟಿಸಿಎಲ್ ಮತ್ತು ಚೆಸ್ಕಾಂ ತಂಡಕ್ಕೆ ಜಿಲ್ಲೆಯಾದ್ಯಂತ ಅಭಿನಂದನೆಗಳ ಮಹಾಪೂರ.

ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಲ್ಲಿ ಪ್ರತಿಯೊಬ್ಬರಿಗೂ ಸಕಾಲದಲ್ಲಿ ಅತ್ಯುತ್ತಮವಾಗಿ ಸ್ಪಂದಿಸಿ ಗ್ರಾಹಕರಿಗೆ, ರೈತರಿಗೆ ನಿರೀಕ್ಷೆಯಂತೆ ನಿಗದಿತ ಅವಧಿಯೊಳಗೆ ವಿದ್ಯುತ್ ಸರಬರಾಜು ಮಾಡಲು ಕ್ರಮ ವಹಿಸಿದ ಎಲ್ಲಾ ಅಧಿಕಾರಿ, ನೌಕರರನ್ನು ರೈತ ಮುಖಂಡರು, ಕರ್ನಾಟಕ ಪತ್ರಕರ್ತರ ಸಂಘ, ವಿವಿಧ ಸಂಘ ಸಂಸ್ಥೆಯವರು ಶ್ಲಾಘಿಸಿದರು.
ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ
ದಿ. 12.01.2026 ರಂದು ಸುಮಾರು 80 ಅಡಿಗೂ ಉದ್ದವಿರುವ 66 ಕೆ.ವಿ ಮಾರ್ಗದ ಟವರ್, ಕಣಿವೆ ಆಂಜನೇಯ ದೇವಸ್ಥಾನದ ಬಳಿ, ಎಂಎಂ ಹಿಲ್ಸ್ ರಸ್ತೆಯ ಬಳಿ ಕುಸಿದಿದೆ, ಇದರಿಂದಾಗಿ 66/11 ಕೆ.ವಿ
ಬಂಡಳ್ಳಿ, ಅಜ್ಜಿಪುರ, ಕೌದಳ್ಳಿ, ರಾಮಾಪುರ ಮತ್ತು ಮಾರ್ಟಳ್ಳಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯ ಫೀಡರ್ ಗಳಲ್ಲಿನ ಸುಮಾರು 120 ಕ್ಕೂ ಹೆಚ್ಚು ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯವಾಗಿತ್ತು. ತಕ್ಷಣವೇ ಕಾರ್ಯ ಪ್ರವೃತ್ತರಾಗಿ 85 ಕ್ಕೂ ಹೆಚ್ಚು ಕೆಪಿಟಿಸಿಎಲ್ ಮತ್ತು ಚೆಸ್ಕಾಂ ಅಧಿಕಾರಿ, ನೌಕರರು ಸತತವಾಗಿ 18 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ಮಧ್ಯ ರಾತ್ರಿ 1.00 ಗಂಟೆಗೆ ವಿದ್ಯುತ್ ಸರಬರಾಜು ನೀಡಲು ಸಫಲರಾಗಿದ್ದಾರೆ.

ಸ್ಥಳಕ್ಕೆ ಚೆಸ್ಕಾಂ ಡೈರೆಕ್ಟ್ ರ್ ದಿವಾಕರ್, ಅಧೀಕ್ಷಕ ಇಂಜಿನಿಯರ್ ಸೋಮಶೇಖರ್, ಕೆಪಿಟಿಸಿಲ್ ಮುಖ್ಯ ಇಂಜಿನಿಯರ್ ನಾಗರಾಜು, ಇಇ ತಬಸ್ಸು, ಶಾಹಿಲಾ ಸಿದ್ದಿಕಿ, ಎಇಇ ರಂಗಸ್ವಾಮಿ, ತಿಪ್ಪೇಸ್ವಾಮಿ, ಚಂದ್ರಶೇಖರ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದು ಯಶಸ್ವಿಯಾಗಿ ನಿರ್ವಹಿಸಿದರು.ಇವರ ತಂಡದ ಕಾರ್ಯಕ್ಕೆ ಚಾಮರಾಜನಗರ ಜಿಲ್ಲೆ ಹಾಗೂ ಮೈಸೂರು ಜಿಲ್ಲೆಯ ಜನರೂ ಸಹ ಹರ್ಷ ವ್ಯಕ್ತಪಡಿಸಿದ್ದಾರೆ .

ವರದಿ: ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!