ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಾಮ್ ಆಯಿಲ್ ಲಾರಿ ಪಲ್ಟಿ : ಎಣ್ಣೆಗಾಗಿ ಮುಗಿಬಿದ್ದ ಜನರು

ಮನೆಯಿಂದ ಹೊರ ಬಂದ ಕೊಡ, ಬಕೆಟ್, ಕ್ಯಾನ್, ಡ್ರಮ್‌ಗಳು : ಕೆಲ ಕಾಲ ಟ್ರಾಫಿಕ್ ಜಾಮ್ : ಜನರನ್ನು ಚದುರಿಸಲು ಪೊಲೀಸರ ಹರಸಾಹಸ

ಕಂಪ್ಲಿ: ಪಾಮ್ ಆಯಿಲ್ ತುಂಬಿದ ಲಾರಿ ಪಲ್ಟಿಯಾದ ಹಿನ್ನಲೆ ಅಕ್ಕಪಕ್ಕದ ಗ್ರಾಮಗಳ ಸಾಕಷ್ಟು ಜನರು ಕೊಡ, ಬಿಂದಿಗೆ, ಬಕೆಟ್ ಸೇರಿದಂತೆ ನಾನಾ ಸಾಮಾಗ್ರಿಗಳನ್ನು ತಂದು ಆಯಿಲ್ ತುಂಬಿಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂತು.

ಹೌದು, ತಾಲೂಕಿನ ದೇವಲಾಪುರ ಗ್ರಾಮದ ಮಾರೆಮ್ಮ ದೇವಸ್ಥಾನದ ಬಳಿ ಎಣ್ಣೆ ತುಂಬಿದ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಶುಕ್ರವಾರ ಉರುಳಿ ಬಿದ್ದ ಘಟನೆ ನಡೆಯಿತು. ಈ ವೇಳೆ ನೂರಾರು ಸಂಖ್ಯೆಯಲ್ಲಿ ಜನರು ಎಣ್ಣೆಗಾಗಿ ಮುಗಿ ಬಿದ್ದಿದ್ದರು.
ಲಾರಿ ಉರುಳಿದ ರಭಸಕ್ಕೆ ಟ್ಯಾಂಕರ್ ಬಿರುಕು ಬಿಟ್ಟಿದ್ದು, ಎಣ್ಣೆ ಸೋರಲಾರಂಭಿಸಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಎಣ್ಣೆ ಹಿಡಿದಿಟ್ಟುಕೊಳ್ಳಲು ನಾಮುಂದು. ತಾಮುಂದು.. ಎಂಬಂತೆ ಜನದಟ್ಟಣೆಯಿಂದ ಕೂಡಿತ್ತು.
ಎಣ್ಣೆ ತುಂಬಿದ ಲಾರಿಯು ಚಳ್ಳಕೇರಿಯಿಂದ ಗಂಗಾವತಿಗೆ ತೆರಳುತ್ತಿತ್ತು ಎನ್ನಲಾಗಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ಯಾಂಕರ್‌ನಿಂದ ಎಣ್ಣೆ ಸೋರುತ್ತಿರುವುದನ್ನು ಕಂಡ ಸುತ್ತಮುತ್ತಲಿನ ಗ್ರಾಮಸ್ಥರು ಕೊಡಗಳು, ಪ್ಲಾಸ್ಟಿಕ್ ಕ್ಯಾನ್‌ಗಳು, ಬಕೆಟ್‌ಗಳು ಹಾಗೂ ಸಣ್ಣ ಡ್ರಮ್‌ಗಳನ್ನು ಹಿಡಿದುಕೊಂಡು ಸ್ಥಳಕ್ಕೆ ಧಾವಿಸಿದ್ದಾರೆ. ಮಹಿಳೆಯರು, ಪುರುಷರು ಮತ್ತು ಮಕ್ಕಳು ಎನ್ನದೆ ಪ್ರತಿಯೊಬ್ಬರೂ ಸೋರುತ್ತಿದ್ದ ಎಣ್ಣೆಯನ್ನು ತುಂಬಿಕೊಳ್ಳಲು ಪೈಪೋಟಿಗೆ ಬಿದ್ದ ದೃಶ್ಯ ಕಂಡುಬಂತು.

ಪೊಲೀಸರ ಹರಸಾಹಸ:
ಘಟನಾ ಸ್ಥಳಕ್ಕೆ ಧಾವಿಸಿದ ಕುಡುತಿನಿ ಠಾಣೆಯ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಅಪಘಾತದ ಸ್ಥಳದಲ್ಲಿ ಜನದಟ್ಟಣೆಯಾದ ಕಾರಣ ಸಂಚಾರ ವ್ಯತ್ಯಯ ಉಂಟಾಗಿತ್ತು. ಮತ್ತು ಎಣ್ಣೆಯು ರಸ್ತೆಯಲ್ಲಿ ಸೋರಿದ ಹಿನ್ನಲೆ ವಾಹನಗಳು ಸ್ಕಿಡ್ ಆಗುವ ಪರಿಣಾಮ ಸವಾರರು ನಿಧಾನಗತಿಯಲ್ಲಿ ಸಾಗಿದರು. ಎಣ್ಣೆ ಹಿಡಿಯಲು ಮುಗಿಬಿದ್ದಿದ್ದ ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಟ್ಟರು. ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!