ಶಿವಮೊಗ್ಗ : ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾದ ಭಾರತೀಯ ಜನತಾ ಪಕ್ಷದ (ಬಿಜೆಪಿ) ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಯುವ ನೇತಾರ ಶ್ರೀ ನಿತಿನ್ ನಬಿನ್ ಅವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಶಿವಮೊಗ್ಗ ಶಾಸಕ ಶ್ರೀ ಎಸ್ ಎನ್ ಚನ್ನಬಸಪ್ಪ ಅವರು ಶುಭ ಹಾರೈಸಿದ್ದಾರೆ.
“ಶ್ರೀ ನಿತಿನ್ ನಬಿನ್ ಅವರು ಪಕ್ಷದ ವಿವಿಧ ಜವಾಬ್ದಾರಿಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ ಅನುಭವ ಹೊಂದಿದ್ದಾರೆ. ಅವರ ಸಂಘಟನಾತ್ಮಕ ಚತುರತೆ ಮತ್ತು ಕಾರ್ಯಕರ್ತರೊಂದಿಗೆ ಅವರು ಹೊಂದಿರುವ ಅವಿನಾಭಾವ ಸಂಬಂಧವು ಪಕ್ಷಕ್ಕೆ ರಾಷ್ಟ್ರಮಟ್ಟದಲ್ಲಿ ಹೊಸ ಸಂಚಲನ ಮೂಡಿಸಲಿದೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಆರಂಭಿಸಿ ಇಂದು ರಾಷ್ಟ್ರೀಯ ಅಧ್ಯಕ್ಷರ ಪೀಠದವರೆಗಿನ ಅವರ ಪಯಣವು ಕೋಟ್ಯಂತರ ಕಾರ್ಯಕರ್ತರಿಗೆ ಪ್ರೇರಣದಾಯಕವಾಗಿದೆ. ಪಕ್ಷದ ಬಲಿಷ್ಠ ಸಂಘಟನೆ ಮತ್ತು ರಾಷ್ಟ್ರ ಹಿತಾಸಕ್ತಿಯೇ ಪರಮೋಚ್ಚ ಎಂಬ ಸಿದ್ಧಾಂತಕ್ಕೆ ಇವರ ನೇತೃತ್ವವು ಇನ್ನಷ್ಟು ಪುಷ್ಟಿ ನೀಡಲಿದೆ.”
“ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಅಭಿವೃದ್ಧಿ ಮಂತ್ರ ಹಾಗೂ ಸನಾತನ ಸಂಸ್ಕೃತಿಯ ತಳಹದಿಯ ಮೇಲೆ ಪಕ್ಷವನ್ನು ಮುನ್ನಡೆಸುವ ಗುರುತರ ಜವಾಬ್ದಾರಿ ಅವರ ಮೇಲಿದೆ. ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ ರಾಷ್ಟ್ರೀಯ ಸಿದ್ಧಾಂತಗಳನ್ನು ಇನ್ನಷ್ಟು ಬಲಪಡಿಸಲಿದೆ. ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ತತ್ವದಡಿ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪುವಂತೆ ಸಂಘಟನೆಯನ್ನು ಬಲಪಡಿಸಲು ಅವರ ಮಾರ್ಗದರ್ಶನ ನಮಗೆ ಅತ್ಯಗತ್ಯವಾಗಿದೆ.”
“ನೂತನ ಅಧ್ಯಕ್ಷರ ನೇತೃತ್ವದಲ್ಲಿ ಮುಂಬರುವ ವಿವಿಧ ರಾಜ್ಯಗಳ ಚುನಾವಣೆಗಳಲ್ಲಿ ಪಕ್ಷವು ಅಭೂತಪೂರ್ವ ಜಯಗಳಿಸಲಿದೆ ಎಂಬ ವಿಶ್ವಾಸ ನಮಗಿದೆ. ಅವರ ಮಾರ್ಗದರ್ಶನದಲ್ಲಿ ನವ ಭಾರತದ ನಿರ್ಮಾಣಕ್ಕಾಗಿ ನಾವೆಲ್ಲರೂ ಸಂಘಟಿತವಾಗಿ ಕೆಲಸ ಮಾಡುತ್ತೇವೆ. ಶ್ರೀ ನಿತಿನ್ ನಬಿನ್ ಅವರ ಅಧಿಕಾರಾವಧಿಯು ಪಕ್ಷಕ್ಕೆ ಅತ್ಯಂತ ಸುವರ್ಣಮಯವಾಗಿರಲಿ ಎಂದು ಆಶಿಸುತ್ತೇನೆ ಎಂದು ಶ್ರೀ ಎಸ್.ಎನ್. ಚನ್ನಬಸಪ್ಪ
ಶಾಸಕರು, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಕೊಡಕ್ಕಲ್ ಶಿವಪ್ರಸಾದ




















