ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯಾವುದೇ ಬೆದರಿಕೆಗಳಿಗೆ ಹೆದರುವುದಿಲ್ಲ, ಸವಾಲುಗಳು ಲೆಕ್ಕಕ್ಕೆ ಇಡುವುದಿಲ್ಲ : ಶಾಸಕ ನಾರಾ ಭರತ್‌ ರೆಡ್ಡಿ

ಬಳ್ಳಾರಿ : ವಾಲ್ಮೀಕಿ ಪುತ್ತಳಿ ಕಾರ್ಯಕ್ರಮದ ಬಳಿಕ ಉತ್ತರವನ್ನು ನೀಡುತ್ತೆನೆ, ಎಲ್ಲದಕ್ಕೂ ಉತ್ತರ ನೀಡುತ್ತೇನೆ. ಸವಾಲುಗಳಿಗೆ ಹೆದರುವುದಿಲ್ಲ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್‌ ರೆಡ್ಡಿ ಹೇಳಿದ್ದಾರೆ.

ಅವರು ನಗರದ 2ನೇ ವಾರ್ಡ್ ನ ಜನರ ಸಮಸ್ಯೆಗಳನ್ನು ಮಂಗಳವಾರ ಆಲಿಸಿದರು. ಈ ವೇಳೆ ಅವರು ಮಾತನಾಡಿ 2ನೇ ವಾರ್ಡ್‌ಗೆ ಮೂರರಿಂದ ಮೂರುವರೆ ಕೋಟಿ ರೂಪಾಯಿ ಅನುದಾನ ನಿಗದಿ ಮಾಡಿದ್ದೇವೆ. ಅದರಲ್ಲಿ ಯಾವ ಕೆಲಸ ಮಾಡಬೇಕು, ಹೇಗೆ ಮಾಡಬೇಕು ಎಂಬುದನ್ನು ಪರಿಶೀಲಿಸುತ್ತಿದ್ದೇನೆ. ಇಲ್ಲಿ ಒಳಚರಂಡಿ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳಿವೆ. ಅವುಗಳನ್ನು ಜನರಿಂದಲೇ ತಿಳಿದುಕೊಂಡು ಯೋಜನೆಯನ್ನು ಯಾವ ರೀತಿ ಜಾರಿಗೆ ತರಬೇಕು ಎಂಬುದನ್ನು ತೀರ್ಮಾನಿಸುತ್ತೇನೆ’ ಎಂದು ಹೇಳಿದರು.

ಬಜೆಟ್‌ನಲ್ಲಿ ಏನನ್ನು ನಿರೀಕ್ಷಿಸಬಹುದು ಎಂಬ ಪ್ರಶ್ನೆಗೆ, ‘ಕೆಎಂಇಆರ್‌ಸಿಯಲ್ಲಿ ಈಗಾಗಲೇ ನೀರು, ರಸ್ತೆಗೆ ಸಂಬಂಧಿಸಿ ಯೋಜನೆಗಳನ್ನು ಪಡೆದುಕೊಂಡಿದ್ದೇವೆ. ಬಜೆಟ್‌ನಲ್ಲಿ ಬಳ್ಳಾರಿಗೆ ಕಾನೂನು ಕಾಲೇಜು ಕೇಳಿದ್ದೇವೆ. ಕಂಪ್ಲಿ ಮತ್ತು ಬಳ್ಳಾರಿಗೆ ಸೇರಿ ಗ್ರಾಮೀಣ ಎಂಜಿನಿಯರಿಂಗ್ ಕಾಲೇಜು ಕೇಳಿದ್ದೇವೆ. ಗ್ರಾಮೀಣ ಪ್ರದೇಶಕ್ಕೂ ಅನುಕೂಲವಾಗುವಂತೆ ಎರಡೂ ತಾಲ್ಲೂಕಿನ ನಡುವೆ ಎಂಜಿನಿಯರಿಂಗ್ ಕಾಲೇಜು ಬೇಕು ಎಂದರು.

ಬಿಜೆಪಿ ನಾಯಕರು ಇತ್ತೀಚೆಗೆ ನಡೆಸಿದ ಸಮಾವೇಶ, ಅದರಲ್ಲಿ ನಾಯಕರು ಆಡಿದ ಮಾತುಗಳು ಭರತ್‌ ರೆಡ್ಡಿ ಬೆಂಬಲಿಗರು ಡ್ರಗ್ಸ್‌ ದಂಧೆಯಲ್ಲಿ ತೊಡಗಿದ್ದಾರೆ ಎಂಬ ಆರೋಪಗಳ ಕುರಿತ ಪ್ರಶ್ನೆಗೆ ‘ವಾಲ್ಮೀಕಿ ಕಾರ್ಯಕ್ರಮ ಆದ ಬಳಿಕ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ. ಅವರು ಹಾಕಿದ ಸವಾಲುಗಳು ನನಗೆ ಲೆಕ್ಕಕ್ಕೆ ಇಲ್ಲ’ ಎಂದರು.
ಬಳ್ಳಾರಿಯಲ್ಲೇ ಸಮ್ಮೇಳನ ಕನ್ನಡ ಸಾಹಿತ್ಯ ಸಮ್ಮೇಳವನ್ನು ಬಳ್ಳಾರಿಯ ಜಿಲ್ಲೆಯ ಶಾಸಕರು ಒತ್ತಾಯ ಮಾಡಿ ತೆಗೆದುಕೊಂಡು ಬಂದಿದ್ದೇವೆ. ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರ ಮೇಲೆ ಅಕ್ರಮದ ಆರೋಪಗಳು ಕೇಳಿ ಬಂದಿವೆ. ಇದೇ ವಿಚಾರ ನ್ಯಾಯಾಲಯದ ಮೆಟ್ಟಿಲನ್ನೂ ಏರಿದೆ. ಈ ಕಾರಣಕ್ಕೆ ಸಮ್ಮೇಳನ ವಿಳಂಬವಾಗಿದೆ. ಅದೇನೇ ಇದ್ದರೂ ಬಳ್ಳಾರಿಯಲ್ಲೇ ಸಮ್ಮೇಳನ ನಡೆಯುವುದು ಶತಃ ಸಿದ್ಧ ಎಂದು ನಾರಾ ಭರತ್‌ ರೆಡ್ಡಿ ಹೇಳಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!