
ಬಳ್ಳಾರಿ / ಕುರುಗೋಡು : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಕಾರ್ಯಾಲಯ ಕುರುಗೋಡು. ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಮುದಾಯ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ ಬಾದನಹಟ್ಟಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಬಾದನಹಟ್ಟಿ ಇವರ ಸಂಯುಕ್ತಾಶ್ರಯದಲ್ಲಿ ಆರೋಗ್ಯ ತಪಾಸಣೆ ಶಿಬಿರ ಆರೋಗ್ಯದ ನಡಿಗೆ ಜನರ ಬಳಿಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಬುಧವಾರರಂದು ಬಾದನಹಟ್ಟಿ ಉಪ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಶಿಬಿರದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳಾದಂತಹ ಡಾ. ಮಂಜುನಾಥ ಜವಳಿ ಅವರು ಉದ್ಘಾಟಿಸಿ ಮಾತನಾಡಿ ಅಸಾಂಕ್ರಾಮಿಕ ರೋಗಗಳ ಬಗ್ಗೆ, ರೋಗದಿಂದ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳುವುದು ಎಂಬದರ ಬಗ್ಗೆ ಮಾಹಿತಿ ನೀಡಿದರು.
75 ಕ್ಕೂ ಜನರ ( ಹದಿಹರೆಯದವರು, ಗರ್ಭಿಣಿಯರು, ಚಿಕ್ಕ ಮಕ್ಕಳು, ಮಹಿಳೆಯರು, ಹಿರಿಯರು, ವೃದ್ಧರು, ಮುಂತಾದ) ಆರೋಗ್ಯ ತಪಾಸಣೆ ಮತ್ತು ಔಷಧಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ನಮ್ಮ ಕ್ಲಿನಿಕ್ ನ ವೈದ್ಯಾಧಿಕಾರಿಗಳಾದ ಡಾಕ್ಟರ್ ಸುನಿಲ್ ನೇತ್ರಾಧಿಕಾರಿಗಳಾದ ಪಲ್ಲವಿ ಹಾಗೂ ಸಮುದಾಯ ಆರೋಗ್ಯ ಅಧಿಕಾರಿ ಸೈಯದ್ ಸುಲ್ತಾನ ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿಗಳಾದ ಜಯಶ್ರೀ ಗ್ರಾಮ ಪಂಚಾಯತಿಯ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು ಸರ್ವ ಸದಸ್ಯರು ಊರಿನ ಹಿರಿಯ ಮುಖಂಡರು NCD ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















