ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ಉದ್ಘಾಟನೆ, ಪ್ರಶಸ್ತಿ ಪ್ರದಾನ, ಕೃತಿ ಲೋಕಾರ್ಪಣೆ

ಜಮಖಂಡಿಯಲ್ಲಿ ನಡೆದ ಕೊಕ್ಕನವರ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ಉದ್ಘಾಟನೆ, ಪ್ರಶಸ್ತಿ ಪ್ರದಾನ, ಕೃತಿ ಲೋಕಾರ್ಪಣೆ ಸಮಾರಂಭದಲ್ಲಿ ಡಾ.ಪ್ರಭುಚೆನ್ನಬಸವ ಮಹಾಸ್ವಾಮಿಗಳು ‘ಜಗವೆಲ್ಲ ನಗುತಿರಲಿ’ ಕೃತಿಯನ್ನು ಲೋಕಾರ್ಪಣೆ ಮಾಡಿದರು.

ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ ಮುಂದಾಗಲಿ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯೆ ಡಾ.ಸುನಂದಾ ಶಿರೂರ ಹೇಳಿದರು.
ನಗರದ ಕೆಇಬಿ ಸಭಾಭವನದಲ್ಲಿ ಶನಿವಾರ ಸಂಜೆ ನಡೆದ ಸಮಾರಂಭದಲ್ಲಿ ‘ಕೊಕ್ಕನವರ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ’, ಪ್ರಶಸ್ತಿ ಪ್ರದಾನ ಹಾಗೂ ಡಾ.ವೈ.ವೈ. ಕೊಕ್ಕನವರ ವಿರಚಿತ ‘ಜಗವೆಲ್ಲ ನಗುತಿರಲಿ’ ಕೃತಿ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಸವಜ್ಯೋತಿ ಶಿಕ್ಷಣ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ.ಬಸವರಾಜ ಕಡ್ಡಿ ಮುಖ್ಯ ಅತಿಥಿಯಾಗಿ ಮಾತನಾಡಿ, ಭಾವನೆಗಳನ್ನು ಕೆರಳಿಸುವ ಸಾಹಿತ್ಯ ರಚಿಸಬಾರದು. ಬದಲಾಗಿ ಭಾವನೆಗಳನ್ನು ಅರಳಿಸುವ ಸಾಹಿತ್ಯ ರಚಿಸಬೇಕು ಎಂದರು.

ಅಥಣಿ ಮೋಟಗಿ ಮಠದ ಡಾ.ಪ್ರಭುಚೆನ್ನಬಸವ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ, ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿ, ಇಂದು ಜನರ ಅಭಿರುಚಿ ತಪ್ಪಿದೆ. ಕೇವಲ ಮನರಂಜನೆ ಮೂಲಕ ಸಂಸ್ಕೃತಿಯನ್ನು ಉಳಿಸಲು ಸಾಧ್ಯವಿಲ್ಲ ಎಂದು ಆಶೀರ್ವಚನ ನೀಡಿದರು.
ನಿವೃತ್ತ ಪ್ರಾಚಾರ್ಯ ಡಾ. ಸಂಗಮೇಶ ಮಟೋಳಿ ಸ್ವೀಕರಿಸಿ ಮಾತನಾಡಿ, ಕೊಕ್ಕನವರ ಅಕಾಡೆಮಿಯು ಕನ್ನಡ ನೆಲ-ಜಲ, ಸಾಹಿತ್ಯ-ಭಾಷೆ, ಕನ್ನಡಾಭಿಮಾನ ಬೆಳೆಸುವ ಕಾರ್ಯವನ್ನು ಮಾಡಲಿ ಎಂದರು.
ಡಾ.ಯಶವಂತ ಕೊಕ್ಕನವರ ವಿರಚಿತ ‘ಜಗವೆಲ್ಲ ನಗುತಿರಲಿ’ ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು.
ನಿವೃತ್ತ ಪ್ರಾಚಾರ್ಯ ಡಾ.ವಿ.ಎಸ್. ಮಾಳಿ ಕೃತಿ ಪರಿಚಯಿಸಿದರು. ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ ಇಂಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಲಕ್ಷ್ಮಿ ಖವಾಸಿ ಅವರು ಪ್ರಾರ್ಥಿಸಿದರು.
ಡಾ.ರಾಜು ಕೊಕ್ಕನವರ ಸ್ವಾಗತಿಸಿದರು.
ಸರಿತಾ ಶಿರಗುಪ್ಪಿ ನಿರೂಪಿಸಿದರು.
ಈರಪ್ಪ ಸುತಾರ ವಂದಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!