ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಉಚಿತ ದಂತ ತಪಾಸಣೆ ಮತ್ತು ಕಣ್ಣಿನ ಆರೋಗ್ಯ ತಪಾಸಣೆ ಶಿಬಿರ

ಬಳ್ಳಾರಿ/ ಕುರುಗೋಡು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್, ತಾಲೂಕ ಆರೋಗ್ಯ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಕುರುಗೋಡು, ಗ್ರಾಮ ಪಂಚಾಯತ್, ಆಯುಷ್ಮಾನ್ ಆರೋಗ್ಯ ಮಂದಿರ ಗೆಣಿಕೆಹಾಳ
ಇವರ ಸಂಯುಕ್ತಾಶ್ರಯದಲ್ಲಿ ಆರೋಗ್ಯದ ನಡಿಗೆ,ಜನರ ಬಳಿಗೆ ಎಂಬ ಧ್ಯೇಯ ವಾಕ್ಯದೊಂದಿಗೆ
ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತವಾಗಿ ಉಚಿತ ದಂತ ತಪಾಸಣೆ ಮತ್ತು ಕಣ್ಣಿನ ಆರೋಗ್ಯ ತಪಾಸಣೆ ಶಿಬಿರವನ್ನು ತಪಾಸಣೆಯನ್ನು ಗೆಣಕೆಹಾಳ್ ಗ್ರಾಮದ ಉಪ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಶಿಬಿರದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಮಂಜುನಾಥ ಜವಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕ್ಯಾನ್ಸರ್ ಎನ್ನುವುದು ದೇಹದ ಕೋಶಗಳು ಅನಿಯಂತ್ರಿತವಾಗಿ ಬೆಳೆದು, ಸುತ್ತಲಿನ ಅಂಗಗಳಿಗೆ ಹರಡುವ ನೂರಕ್ಕೂ ಹೆಚ್ಚು ರೋಗಗಳ ಒಂದು ಗುಂಪು. DNA ನಲ್ಲಿನ ರೂಪಾಂತರಗಳಿಂದಾಗಿ ಈ ಕೋಶಗಳು ಸಾಮಾನ್ಯ ಜೀವಕೋಶಗಳಿಗಿಂತ ಭಿನ್ನವಾಗಿ ವರ್ತಿಸುತ್ತವೆ. ಹೆದರಿಕೆ ಬೇಡ ಜಾಗೃತಿ ಇರಲಿ, ಆರೋಗ್ಯಕರ ಜೀವನಶೈಲಿ, ಧೂಮಪಾನ ತ್ಯಜಿಸುವುದು, ನಿಯಮಿತ ವ್ಯಾಯಾಮ, ಪೌಷ್ಟಿಕ ಆಹಾರ, ಮತ್ತು ಮುನ್ನೆಚ್ಚರಿಕೆ ತಪಾಸಣೆಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು. ಕ್ಯಾನ್ಸರ್ ಕುರಿತು ಮಾಹಿತಿ ನೀಡಿದರು.
ಆರೋಗ್ಯ ತಪಾಸಣಾ ಶಿಬಿರದಲ್ಲಿ 103ಕ್ಕೂ ಹೆಚ್ಚಿನ ಹದಿಹರೆಯದವರಿಗೆ, ಗರ್ಭಿಣಿಯರಿಗೆ, ಚಿಕ್ಕ ಮಕ್ಕಳಿಗೆ, ಮಹಿಳೆಯರಿಗೆ, ಹಿರಿಯರಿಗೆ, ವೃದ್ಧರಿಗೆ ಮುಂತಾದವರಿಗೆ ಆರೋಗ್ಯ ತಪಾಸಣೆ ಕೈಗೊಂಡು ಔಷಧಿಗಳನ್ನು ವಿತರಿಸಲಾಯಿತು.
ನಮ್ಮ ಕ್ಲಿನಿಕ್ ನ ವೈದ್ಯಾಧಿಕಾರಿಗಳಾದ ಡಾ. ಸುನಿಲ್
ದಂತ ವೈದ್ಯಾಧಿಕಾರಿ ಗಾಯಿತ್ರಿ,
ನೇತ್ರಾಧಿಕಾರಿ ಜಿ.ಪಲ್ಲವಿ.
PHCO ರೇಣುಕಾ, H.I.O ಷಡಕ್ಷರಯ್ಯ ಸ್ವಾಮಿ, CHO ಕುಮಾರಿ ಸೈಯದ್ ಸುಲ್ತಾನ, ICTC ಆಪ್ತ ಸಮಾಲೋಚಕರಾದ ಎನ್.ಕರಿಬಸವ, NCD ಲ್ಯಾಬ್ ಟೆಕ್ನಿಯಿಷನ್, ಅಬ್ದುಲ್ ಸುಭಾನ್ ಕೆ, ಎನ್ .ಸಿ.ಡಿ ಆಪ್ತ ಸಮಾಲೋಚಕರಾದ ನೇತ್ರಾವತಿ, ಎನ್.ಸಿ.ಡಿ. ಡಾಟಾ ಎಂಟ್ರಿ ಆಪರೇಟರ್ ಶೇಖರ್ ಹೆಚ್, ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಗ್ರಾಮದ ಸಾರ್ವಜನಿಕರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!