
ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎಡದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ -2026 ರ ಯುವ ಕವಿಗೋಷ್ಠಿಗೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಮಳಗಾವಿಯ ಗಣಿತ ಶಿಕ್ಷಕರಾದ ಶ್ರೀ ಮುತ್ತು ವಡ್ಡರ ಆಯ್ಕೆಯಾಗಿದ್ದಾರೆ.
ವೃತ್ತಿಯಲ್ಲಿ ಗಣಿತ ಶಿಕ್ಷಕರಾಗಿರುವ ಇವರು ಪ್ರವೃತ್ತಿಯಲ್ಲಿ ಕಥೆ ಕವನ ಹಾಗೂ ನಾಡಿನ ಹಲವಾರು ಪತ್ರಿಕೆಗಳಿಗೆ ಲೇಖನಗಳನ್ನು ಬರೆಯುವ ಹವ್ಯಾಸ ಹೊಂದಿದ್ದಾರೆ. ಇತ್ತೀಚೆಗೆ ಇವರ ಸನ್ಮಾರ್ಗದ ದುಂಬಿ ಎಂಬ ಸ್ಫೂರ್ತಿದಾಯಕ ಕವನ ಸಂಕಲನ ಬಿಡುಗಡೆಯಾಗಿ ಓದುಗರ ಮೆಚ್ಚುಗೆ ಪಡೆದಿದೆ.
ಇದೇ ತಿಂಗಳ 7ನೇ ತಾರೀಖಿನಂದು ಮಹಿಳಾ ಸಮಾಜ ಆವರಣ, ರಾಯಚೂರು ಇಲ್ಲಿ ನಡೆಯುವ ಯುವ ಕವಿಗೋಷ್ಠಿಯಲ್ಲಿ ತಮ್ಮ ಸ್ವರಚಿತ ಕವನ ವಾಚನ ಮಾಡಲಿದ್ದಾರೆ. ರಾಯಚೂರು ಜಿಲ್ಲಾ ಉತ್ಸವದ ಯುವ ಕವಿಗೋಷ್ಠಿಗೆ ಆಯ್ಕೆಯಾದ ಶ್ರೀ ಮುತ್ತು ವಡ್ಡರ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮನ್ನು ಯುವ ಕವಿಗೋಷ್ಠಿಗೆ ಆಯ್ಕೆ ಮಾಡಿದ ಸರ್ವ ಆಡಳಿತ ಮಂಡಳಿಯವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
- ಕರುನಾಡ ಕಂದ ಪತ್ರಿಕೆ.




















