ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕ. ರ. ವೇ ಪ್ರವೀಣ್ ಶೆಟ್ಟಿ ಬಣ ಉತ್ತರ ಕರ್ನಾಟಕ ಘಟಕದ ವತಿಯಿಂದ ಮನವಿ ಸಲ್ಲಿಕೆ

ಕಲಬುರಗಿ ಜಿಲ್ಲೆಯ ಯಡ್ರಾಮಿ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ತಾಲೂಕು ದಂಡಾಧಿಕಾರಿಗಳಿಗೂ ಹಾಗೂ ಸಾರಿಗೆ ಇಲಾಖೆಯ ಘಟಕ ವ್ಯವಸ್ಥಾಪಕರಿಗೂ ಮನವಿ ಸಲ್ಲಿಸಿ ಸಿಸಿ ಕ್ಯಾಮೆರಾದ ಅವಶ್ಯಕತೆ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಗಮನಕ್ಕೆ ತರಲಾಯಿತು.
ಒಂದು ವಾರದಲ್ಲಿ ಯಡ್ರಾಮಿ ಪಟ್ಟಣದ ಬಸ್ ನಿಲ್ದಾಣದ ಎರಡು ಮುಖ್ಯ ದ್ವಾರಕ್ಕೆ ಹಾಗೂ ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದಲ್ಲಿ ಸಿ ಸಿ ಕ್ಯಾಮೆರಾ ಅಳವಡಿಸಬೇಕೆಂದು ವಿನಂತಿಸಲಾಯಿತು.
ಸಂಬಂಧಪಟ್ಟ ಅಧಿಕಾರಿಗಳು ಸಕರಾತ್ಮಕವಾಗಿ ಸ್ಪಂದಿಸಿ ಕ್ರಮ ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಯಡ್ರಾಮಿ ತಾಲೂಕು ಗೌರವ ಅಧ್ಯಕ್ಷರು ಹಾಗೂ ಜೇವರ್ಗಿ ತಾಲೂಕಿನ ಪಿ ಎಲ್ ಡಿ ಬ್ಯಾಂಕ್ ಉಪಾಧ್ಯಕ್ಷರಾದ ಸಾಂಭಶಿವ ಎಂ. ಹಿರೇಮಠ, ರಾಜಕೀಯ ಮುಖಂಡರಾದ ಗುರಣ್ಣ ದೊಡ್ಡಮನಿ, ಕಾಚಾಪುರ ಕರವೇ ಉತ್ತರ ಕರ್ನಾಟಕ ಅಧ್ಯಕ್ಷರ ಕಾರ್ಯದರ್ಶಿಯಾದ ಸಾಹೇಬಗೌಡ ಬಿ. ದೇಸಾಯಿ, ಕರವೇ ಯಡ್ರಾಮಿ ತಾಲೂಕು ಉಸ್ತುವಾರಿ ಅಧ್ಯಕ್ಷರಾದ ದೇವೇಂದ್ರ ನಾಯ್ಕೋಡಿ ಮಾಣಶುಣಗಿ, ರಾಜಕೀಯ ಮುಖಂಡರಾದ ಮಲ್ಲಿಕಾರ್ಜುನ ಬಿರಾದಾರ , ಕರವೇ ತಾಲೂಕು ಮುಖಂಡರಾದ ಹನುಮಂತ ಕೂಡ್ಗಿ, ಕಾಚಾಪುರ ಕರವೇ ಹೋರಾಟಗಾರರಾದ ರಾಚೋಟಯ್ಯ ಹಿರೇಮಠ, ಕಾಚಾಪುರ ರೈತ ಹೋರಾಟಗಾರರಾದ ಯಲ್ಲಾಲಿಂಗ ಡಿ. ಹರನಾಳ, ನವ ಕರ್ನಾಟಕ ನಿರ್ಮಾಣ ಸೇನೆ ತಾಲೂಕು ಅಧ್ಯಕ್ಷರಾದ ರೇವಣಸಿದ್ದ ಮಕಾಶಿ, ಬಸಯ್ಯ ಹಿರೇಮಠ ಮಾಣಶುಣಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ ಆರ್. ಎಸ್. ಹಿರೇಮಠ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!