ನಿನ್ನೆ ಶಿಗ್ಗಾಂವ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಂಕೀರ್ಣದಲ್ಲಿ, ದಿನಾಂಕ 14-02-2026 ರಂದು ಹಾವೇರಿ ಜಿಲ್ಲೆಯಲ್ಲಿ ನಡೆಯಲಿರುವ “ವಾಸಿಸುವವನೇ ಮನೆ ಒಡೆಯ” ಯೋಜನೆಯ ಪಟ್ಟಾ ವಿತರಣೆ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು.
ಈ ಸಭೆಗೆ ಶಿಗ್ಗಾಂವ–ಸವಣೂರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಅಹ್ಮದ್ಖಾನ್ ಪಠಾಣ ಅವರು ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಸವಣೂರ ಉಪವಿಭಾಗಾಧಿಕಾರಿಗಳಾದ ಶ್ರೀ ಶುಭಂ ಶುಕ್ಲಾ, ಸವಣೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ರಮೇಶ ದುರಗಪ್ಪ ಹರಿಜನ, ಶಿಗ್ಗಾಂವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಗುಡ್ಡಪ್ಪ ಜಲದಿ, ಶಿಗ್ಗಾಂವ ಪಂಚ ಗ್ಯಾರಂಟಿ ಸಮಿತಿಯ ಸದಸ್ಯರಾದ ಶ್ರೀ ಎಸ್. ಎಫ್. ಮಣಕಟ್ಟಿ ಅವರು ಉಪಸ್ಥಿತರಿದ್ದರು.
ಅದೇ ರೀತಿ ಶಿಗ್ಗಾಂವ ತಾಲೂಕು ದಂಡಾಧಿಕಾರಿಗಳಾದ ಶ್ರೀ ಯಲ್ಲಪ್ಪ ಶೆ. ಗೊಣ್ಣೆಣ್ಣನವರ, ಸವಣೂರ ತಾಲೂಕು ದಂಡಾಧಿಕಾರಿಗಳಾದ ಶ್ರೀ ರವಿ ಕೊರವರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ವಾಸಿಸುವವನೇ ಮನೆ ಒಡೆಯ ಯೋಜನೆಯಡಿ ನಡೆಯುವ ಪಟ್ಟಾ ವಿತರಣೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ಚರ್ಚೆ ನಡೆಸಲಾಗಿದ್ದು, ಕಾರ್ಯಕ್ರಮದ ರೂಪರೇಖೆ, ಸಿದ್ಧತೆಗಳು ಹಾಗೂ ಜನರಿಗೆ ತಲುಪುವಂತೆ ವ್ಯವಸ್ಥೆ ಮಾಡುವ ಬಗ್ಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು.
ವರದಿ ಬಸವರಾಜ ಎಸ್. ಎನ್



















