ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿವಾಲಯದಲ್ಲಿ ಶಿವನ ದರ್ಶನ ಪಡೆಯುವ ಯೋಗ್ಯ ಪದ್ಧತಿ ಮತ್ತು ಜ್ಯೋತಿರ್ಲಿಂಗಗಳು

ಸನಾತನ ಸಂಸ್ಥೆಯ ವಿಶೇಷ ಲೇಖನ.

ಶಿವಾಲಯದಲ್ಲಿ ಶಿವನ ದರ್ಶನ ಪಡೆಯುವ ಮುನ್ನ ನಂದಿಯ ಎರಡೂ ಕೊಂಬುಗಳಿಗೆ ಕೈಮುಟ್ಟಿಸಿ ಅದರ ದರ್ಶನ ಪಡೆಯಬೇಕು ನಂದಿಯ ಕೊಂಬುಗಳಿಂದ ಪ್ರಕ್ಷೇಪಿತವಾಗುವ ಶಿವತತ್ತ್ವದ ಸಗುಣ ಮಾರಕ ಲಹರಿಗಳಿಂದ ವ್ಯಕ್ತಿಯ ಶರೀರದಲ್ಲಿನ ರಜ-ತಮ ಕಣಗಳ ವಿಘಟನೆಯಾಗಿ ವ್ಯಕ್ತಿಯ ಸಾತ್ತ್ವಿಕತೆಯು ಹೆಚ್ಚಾಗುತ್ತದೆ. ಇದರಿಂದ ವ್ಯಕ್ತಿಗೆ ಶಿವಲಿಂಗದಿಂದ ಹೊರ ಬೀಳುವ ಶಕ್ತಿಶಾಲಿ ಲಹರಿಗಳನ್ನು ಸಹಿಸಲು ಸಾಧ್ಯವಾಗುತ್ತದೆ. ನಂದಿಯ ಕೊಂಬುಗಳಿಂದ ದರ್ಶನವನ್ನು ಪಡೆದುಕೊಳ್ಳದೇ ನೇರವಾಗಿ ಶಿವನ ದರ್ಶನವನ್ನು ಪಡೆದುಕೊಂಡರೆ ತೇಜ ಲಹರಿಗಳ ಆಘಾತದಿಂದ ಶರೀರದಲ್ಲಿ ಉಷ್ಣತೆ ನಿರ್ಮಾಣವಾಗುವುದು, ತಲೆ ಭಾರವಾಗುವುದು, ಶರೀರ ಅಕಸ್ಮಾತ್ತಾಗಿ ಕಂಪಿಸುವುದು ಮುಂತಾದ ತೊಂದರೆಗಳಾಗಬಹುದು.

ಶೃಂಗದರ್ಶನದ ಮಹತ್ವವೇನು?

‘ಶೃಂಗದರ್ಶನ’ ಎಂದರೆ ನಂದಿಯ ಕೊಂಬುಗಳ ಮೂಲಕ ಶಿವಲಿಂಗವನ್ನು ನೋಡುವುದು. ಶೃಂಗದರ್ಶನದ ಯೋಗ್ಯ ಪದ್ಧತಿ

ವಾಮಹಸ್ತಿ ವೃಷಣ ಧರೋನಿ|

ತರ್ಜನಿ ಅಂಗುಷ್ಠ ಶೃಂಗೀ ಠೆವೋನಿ|| – ಶ್ರೀಗುರುಚರಿತ್ರೆ

ಅರ್ಥ : ನಂದಿಯ ಬಲಬದಿಗೆ ಕುಳಿತುಕೊಂಡು ಅಥವಾ ನಿಂತುಕೊಂಡು ಎಡಗೈಯನ್ನು ನಂದಿಯ ವೃಷಣದ ಮೇಲಿಡಬೇಕು. ಬಲಗೈಯ ತರ್ಜನಿ (ಹೆಬ್ಬೆರಳಿನ ಸಮೀಪದ ಬೆರಳು) ಮತ್ತು ಹೆಬ್ಬೆರಳನ್ನು ನಂದಿಯ ಎರಡು ಕೊಂಬುಗಳ ಮೇಲಿಡಬೇಕು. ಎರಡು ಕೊಂಬುಗಳು ಮತ್ತು ಅದರ ಮೇಲಿರಿಸಿದ ಎರಡು ಬೆರಳುಗಳ ನಡುವಿನ ಖಾಲಿ ಜಾಗದಿಂದ ಶಿವಲಿಂಗದ ದರ್ಶನವನ್ನು ಪಡೆದುಕೊಳ್ಳಬೇಕು.

ಲಿಂಗದ ದರ್ಶನವನ್ನು ಪಡೆದುಕೊಳ್ಳುವಾಗ ಶಿವಲಿಂಗ ಮತ್ತು ನಂದಿಯ ನಡುವೆ ನಿಂತುಕೊಳ್ಳದೇ ಅಥವಾ ಕುಳಿತುಕೊಳ್ಳದೇ ಲಿಂಗ ಮತ್ತು ನಂದಿಯನ್ನು ಜೋಡಿಸುವ ರೇಖೆಯ ಬದಿಯಲ್ಲಿ ನಿಂತುಕೊಳ್ಳಬೇಕು. ಶಿವಲಿಂಗದಿಂದ ಬರುವ ಶಕ್ತಿಶಾಲಿ ಸಾತ್ತ್ವಿಕ ಲಹರಿಗಳು ಮೊದಲು ನಂದಿಯ ಕಡೆಗೆ ಆಕರ್ಷಿತವಾಗಿ ನಂತರ ನಂದಿಯಿಂದ ವಾತಾವರಣದಲ್ಲಿ ಪ್ರಕ್ಷೇಪಿತವಾಗುತ್ತಿರುತ್ತವೆ. ನಂದಿಯ ವೈಶಿಷ್ಟ್ಯವೇನೆಂದರೆ ನಂದಿಯಿಂದ ಈ ಲಹರಿಗಳು ಆವಶ್ಯಕತೆಗನುಸಾರವಾಗಿಯೇ ಪ್ರಕ್ಷೇಪಿತವಾಗುತ್ತಿರುತ್ತವೆ. ಇದರಿಂದ ಶಿವಲಿಂಗದ ದರ್ಶನವನ್ನು ಪಡೆಯುವವರಿಗೆ ಲಹರಿಗಳು ಶಿವನಿಂದ ನೇರವಾಗಿ ಸಿಗುವುದಿಲ್ಲ; ಇದರಿಂದ ಅವರಿಗೆ ಶಿವನಿಂದ ಬರುವ ಶಕ್ತಿ ಶಾಲಿ ಲಹರಿಗಳಿಂದ ತೊಂದರೆಯಾಗುವುದಿಲ್ಲ. ಇಲ್ಲಿ ಗಮನದಲ್ಲಿಡಬೇಕಾದ ಮಹತ್ವದ ಸಂಗತಿಯೇನೆಂದರೆ ಶಿವನಿಂದ ಬರುವ ಲಹರಿಗಳು ಸಾತ್ತ್ವಿಕವೇ ಆಗಿದ್ದರೂ ಸಾಮಾನ್ಯ ವ್ಯಕ್ತಿಗಳ ಆಧ್ಯಾತ್ಮಿಕ ಮಟ್ಟವು ಹೆಚ್ಚಿಗೆ ಇಲ್ಲದ ಕಾರಣ ಆ ಸಾತ್ತ್ವಿಕ ಲಹರಿಗಳನ್ನು ಸಹಿಸಿಕೊಳ್ಳುವ ಕ್ಷಮತೆಯು ಅವರಲ್ಲಿರುವುದಿಲ್ಲ. ಆದುದರಿಂದ ಈ ಲಹರಿಗಳಿಂದ ಅವರಿಗೆ ತೊಂದರೆಯಾಗುವ ಸಾಧ್ಯತೆಯಿರುತ್ತದೆ. ಆದುದರಿಂದ ಸಾಮಾನ್ಯ ವ್ಯಕ್ತಿಗಳು ಲಿಂಗದ ದರ್ಶನವನ್ನು ಪಡೆದುಕೊಳ್ಳುವಾಗ ಲಿಂಗ ಮತ್ತು ನಂದಿಯ ನಡುವೆ ನಿಂತುಕೊಳ್ಳದೇ ಅಥವಾ ಕುಳಿತು ಕೊಳ್ಳದೇ ಲಿಂಗ ಮತ್ತು ನಂದಿಯನ್ನು ಜೋಡಿಸುವ ರೇಖೆಯ ಬದಿಗೆ ನಿಂತು ಕೊಳ್ಳಬೇಕು.

ಜ್ಯೋತಿರ್ಲಿಂಗಗಳು

ಭಾರತದಲ್ಲಿನ ಪ್ರಮುಖ ಶಿವಸ್ಥಾನಗಳೆಂದರೆ ಹನ್ನೆರಡು ಜ್ಯೋತಿರ್ಲಿಂಗಗಳು. ಅವು ತೇಜಸ್ವಿ ರೂಪದಲ್ಲಿ ಉತ್ಪನ್ನವಾದವು. ಹದಿಮೂರನೆಯ ಪಿಂಡಕ್ಕೆ ಕಾಲಪಿಂಡವೆನ್ನುತ್ತಾರೆ. ಕಾಲದ ಆಚೆಗೆ ಹೋಗಿರುವ ಪಿಂಡವೆಂದರೆ (ದೇಹವೆಂದರೆ) ಕಾಲಪಿಂಡ. ಹನ್ನೆರಡು ಜ್ಯೋತಿರ್ಲಿಂಗಗಳು ಮುಂದಿನಂತಿವೆ. ಹನ್ನೆರಡು ಜ್ಯೋತಿರ್ಲಿಂಗಗಳು ಶರೀರವಾಗಿದ್ದು ಕಾಠಮಾಂಡು (ನೇಪಾಳ) ದಲ್ಲಿರುವ ಪಶುಪತಿನಾಥ ಜ್ಯೋತಿರ್ಲಿಂಗವು ತಲೆಯಾಗಿದೆ.

ಜ್ಯೋತಿರ್ಲಿಂಗ ಮತ್ತು ಸಂತರ ಸಮಾಧಿಸ್ಥಳಗಳ ಮಹತ್ವ

ಸಂತರು ಸಮಾಧಿಯನ್ನು ಸ್ವೀಕರಿಸಿದ ನಂತರ ಅವರ ಕಾರ್ಯವು ಹೆಚ್ಚು ಪ್ರಮಾಣದಲ್ಲಿ ಸೂಕ್ಷ್ಮದಲ್ಲಿ ನಡೆಯುತ್ತದೆ. ಸಂತರು ದೇಹತ್ಯಾಗ ಮಾಡಿದ ನಂತರ ಅವರ ದೇಹದಿಂದ ಪ್ರಕ್ಷೇಪಿತವಾಗುವ ಚೈತನ್ಯಲಹರಿ ಮತ್ತು ಸಾತ್ತ್ವಿಕ ಲಹರಿಗಳ ಪ್ರಮಾಣವು ಹೆಚ್ಚಿರುತ್ತದೆ. ಹೇಗೆ ಸಂತರ ಸಮಾಧಿಯು ಭೂಮಿಯ ಕೆಳಗಿರುತ್ತದೆಯೋ, ಹಾಗೆಯೇ ಜ್ಯೋತಿರ್ಲಿಂಗಗಳು ಮತ್ತು ಸ್ವಯಂಭೂ ಶಿವಲಿಂಗಗಳು ಭೂಮಿಯ ಕೆಳಗಿರುತ್ತವೆ. ಈ ಶಿವಲಿಂಗಗಳಲ್ಲಿ ಇತರ ಶಿವಲಿಂಗಗಳ ತುಲನೆಯಲ್ಲಿ ನಿರ್ಗುಣ ತತ್ತ್ವದ ಪ್ರಮಾಣವು ಹೆಚ್ಚಿರುವುದರಿಂದ ಅವುಗಳಿಂದ ಚೈತನ್ಯ ಮತ್ತು ಸಾತ್ತ್ವಿಕತೆಯು ಹೆಚ್ಚು ಪ್ರಮಾಣದಲ್ಲಿ ಮತ್ತು ಸತತವಾಗಿ ಪ್ರಕ್ಷೇಪಿಸುತ್ತಿರುತ್ತದೆ. ಇದರಿಂದ ಪೃಥ್ವಿಯ ಮೇಲಿನ ವಾತಾವರಣವು ಸತತವಾಗಿ ಶುದ್ಧವಾಗುತ್ತಿರುತ್ತದೆ, ಅದರೊಂದಿಗೆ ಜ್ಯೋತಿರ್ಲಿಂಗ ಮತ್ತು ಸಂತರ ಸಮಾಧಿಸ್ಥಳಗಳಿಂದ ಪಾತಾಳದ ದಿಕ್ಕಿನಲ್ಲಿಯೂ ಸತತವಾಗಿ ಚೈತನ್ಯ ಮತ್ತು ಸಾತ್ತ್ವಿಕತೆಯ ಪ್ರಕ್ಷೇಪಣೆಯಾಗಿ ಪಾತಾಳದಲ್ಲಿರುವ ಕೆಟ್ಟ ಶಕ್ತಿಗಳೊಂದಿಗೆ ಅವರ ಯುದ್ಧವು ಸತತವಾಗಿ ನಡೆಯುತ್ತಿರುತ್ತದೆ. ಇದರಿಂದ ಪಾತಾಳದಲ್ಲಿನ ಶಕ್ತಿಶಾಲಿ ಕೆಟ್ಟ ಶಕ್ತಿಗಳ ಹಲ್ಲೆಯಿಂದ ಭೂಲೋಕದ ರಕ್ಷಣೆಯಾಗುತ್ತದೆ.

ವೈಶಿಷ್ಟ್ಯಗಳು

ರುದ್ರಾಕ್ಷದ ಮಂತ್ರಸಿದ್ಧಿಗಾಗಿ ಗುಣ ಹಾಗೂ ಶಕ್ತಿಗೆ ತಕ್ಕಂತೆ ಯೋಗ್ಯ ಗುಣಗಳುಳ್ಳ ಜ್ಯೋತಿರ್ಲಿಂಗವನ್ನು ಆರಿಸಿಕೊಂಡು ಆ ಜ್ಯೋತಿರ್ಲಿಂಗಕ್ಕೆ ಅಭಿಷೇಕ ಮಾಡಬೇಕು. ಉದಾಹರಣೆಗೆ ಮಹಾಕಾಳನು ತಾಮಸಶಕ್ತಿಯಿಂದ ಯುಕ್ತನಾಗಿದ್ದಾನೆ, ನಾಗನಾಥನು ಹರಿಹರ ಸ್ವರೂಪನಾಗಿದ್ದು ಸತ್ತ್ವ ಹಾಗೂ ತಮೋಗುಣ ಪ್ರಧಾನನಾಗಿದ್ದಾನೆ, ತ್ರ್ಯಂಬಕೇಶ್ವರನು ತ್ರಿಗುಣಾತ್ಮಕ (ಅವಧೂತ) ನಾಗಿದ್ದಾನೆ ಮತ್ತು ಸೋಮನಾಥನು ರೋಗಮುಕ್ತಿಗಾಗಿ ಯೋಗ್ಯನಾಗಿದ್ದಾನೆ.

ಜ್ಯೋತಿರ್ಲಿಂಗದ ಅರ್ಥ

ವ್ಯಾಪಕ ಬ್ರಹ್ಮಾತ್ಮಲಿಂಗ ಅಥವಾ ವ್ಯಾಪಕ ಪ್ರಕಾಶ

ತೈತ್ತಿರೀಯ ಉಪನಿಷತ್ತಿನಲ್ಲಿ ಬ್ರಹ್ಮ, ಮಾಯೆ, ಜೀವ, ಮನಸ್ಸು, ಬುದ್ಧಿ, ಚಿತ್ತ, ಅಹಂಕಾರ ಮತ್ತು ಪಂಚಮಹಾಭೂತಗಳು ಎಂಬ ಹನ್ನೆರಡು ತತ್ತ್ವಗಳನ್ನು ಹನ್ನೆರಡು ಜ್ಯೋತಿರ್ಲಿಂಗಗಳೆಂದು ಕರೆಯಲಾಗಿದೆ. ಶಿವಲಿಂಗದ ಹನ್ನೆರಡು ಖಂಡಗಳು ಪಾಣಿಪೀಠವು ಯಜ್ಞವೇದಿಕೆಯ ಮತ್ತು ಲಿಂಗವು ಯಜ್ಞದ ಪ್ರತೀಕವಾಗಿರುವ ಜ್ಯೋತಿಯ, ಅಂದರೆ ಯಜ್ಞಶಿಖೆಯ ಪ್ರತೀಕವಾಗಿದೆ. ದ್ವಾದಶ ಆದಿತ್ಯರ ಪ್ರತೀಕಗಳು ಸುಪ್ತಾವಸ್ಥೆಯಲ್ಲಿರುವ ಜ್ವಾಲಾಮುಖಿಯ ಉದ್ರೇಕ ಸ್ಥಾನಗಳು, ದಕ್ಷಿಣ ದಿಕ್ಕಿನ ಸ್ವಾಮಿಯಾದ ಯಮನು ಶಂಕರನ ಅಧಿಪತ್ಯದಲ್ಲಿರುವುದರಿಂದ ದಕ್ಷಿಣ ದಿಕ್ಕು ಶಂಕರನ ದಿಕ್ಕಾಗುತ್ತದೆ. ಜ್ಯೋತಿರ್ಲಿಂಗಗಳು ದಕ್ಷಿಣಾಭಿಮುಖಿಯಾಗಿರುತ್ತವೆ, ಅಂದರೆ ಜ್ಯೋತಿರ್ಲಿಂಗಗಳ ಪಾಣಿಪೀಠದ ಹರಿನಾಳವು ದಕ್ಷಿಣ ದಿಕ್ಕಿಗಿರುತ್ತದೆ. ಬಹುತೇಕ ಮಂದಿರಗಳು ದಕ್ಷಿಣಾಭಿಮುಖವಾಗಿರುವುದಿಲ್ಲ. ಪಾಣಿಪೀಠವು ದಕ್ಷಿಣಾಭಿಮುಖವಾಗಿದ್ದರೆ ಆ ಲಿಂಗವು ಹೆಚ್ಚು ಶಕ್ತಿಶಾಲಿಯಾಗಿರುತ್ತದೆ. ಹರಿನಾಳವು ಉತ್ತರ ದಿಕ್ಕಿಗಿದ್ದರೆ ಆ ಲಿಂಗವು ಕಡಿಮೆ ಶಕ್ತಿಶಾಲಿಯಾಗಿರುತ್ತದೆ.

ಆಧಾರ :ಸನಾತನ ಸಂಸ್ಥೆಯ “ಶಿವ” ಗ್ರಂಥ

ಸಂಗ್ರಹ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ಬೆಂಗಳೂರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!