ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದ ಹಳೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಸಾರ್ವಜನಿಕ ಮೂತ್ರಾಲಯ ಗಬ್ಬು ನಾರುತ್ತಿದೆ. ಸ್ವಚ್ಛ ಮಾಡಿಸಲು ಹನಮನಾಳ ಗ್ರಾಮ ಪಂಚಾಯಿತಿಯವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಸ್ವಚ್ಛತೆ ಇಲ್ಲದಿರುವುದರಿಂದ ಮೂಗು ಮುಚ್ಚಿಕೊಂಡು ಮೂತ್ರ ಮಾಡುವಂತಾಗಿದೆ. ಕಾಲು ಇಡಲು ಸಹ ಆಗುತ್ತಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಮಿಷನ್ ಯೋಜನೆಯನ್ನು ಹನಮನಾಳ ಗ್ರಾಮ ಪಂಚಾಯಿತಿಯವರು ಪಾಲಿಸುತ್ತಿಲ್ಲ. ಈ ಹನಮನಾಳ ಗ್ರಾಮ ಪಂಚಾಯಿತಿಗೆ ರಾಜ್ಯ ಸರ್ಕಾರ ಕಳೆದ ಕೆಲ ವರ್ಷಗಳ ಹಿಂದೆ ಗಾಂಧಿ ಪುರಸ್ಕಾರ ನೀಡಿ ಗೌರವಿಸಿತ್ತು. ಆದರೆ ಈ ಹನಮನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಕೂಡಲೇ ಹನುಮನಾಳ ಗ್ರಾಮದಲ್ಲಿರುವ ಸಾರ್ವಜನಿಕ ಮೂತ್ರಾಲಯವನ್ನು ಸ್ವಚ್ಛ ಮಾಡಿಸಲು ಹನಮನಾಳ ಗ್ರಾಮ ಪಂಚಾಯಿತಿಯವರು ಮುಂದಾಗಬೇಕೆಂದು ನಿವಾಸಿಗಳ ಆಗ್ರಹವಾಗಿದೆ.
- ಕರುನಾಡ ಕಂದ ಪತ್ರಿಕೆ




















