ಬೀದರ ಜಿಲ್ಲೆ ಬಸವಕಲ್ಯಾಣ: ಕರ್ನಾಟಕ ರಕ್ಷಣಾ ವೇದಿಕೆ (ಕಾವಲುಪಡೆ) ರಾಜ್ಯಾಧ್ಯಕ್ಷರಾದ ಶ್ರೀ ಹೆಚ್. ಸುರೇಶ್ ರವರ ಒಪ್ಪಿಗೆ ಮೇರೆಗೆ ದಿ. 21-02-2026 ರಂದು ಜಿಲ್ಲಾಧ್ಯಕ್ಷರಾದ ಶ್ರೀ ಅವಿನಾಶ ಬುಧರಕರ್ ಇವರ ನೇತೃತ್ವದಲ್ಲಿ ಬೀದರ್ ಜಿಲ್ಲಾ ಬಸವಕಲ್ಯಾಣ ತಾಲ್ಲೂಕಿನ ಅಧ್ಯಕ್ಷರಾಗಿ ಶ್ರೀ ಸುರೇಶ ಜಮ್ಮು ಕಿಟ್ಟಾ ಇವರಿಗೆ ನೇಮಕಾತಿ ಆದೇಶ ನೀಡಿರುತ್ತಾರೆ. ಇವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ. ಕರ್ನಾಟಕ ರಕ್ಷಣಾ ವೇದಿಕೆ (ಕಾವಲುಪಡೆ) ಅತ್ಯಂತ ಕಡಿಮೆ ಅವಧಿಯಲ್ಲಿ ಗಮನಾರ್ಹ ಚಟುವಟಿಕೆಗಳನ್ನು ಕೈಗೊಂಡು ಹೊಸ ಭರವಸೆಗಳನ್ನು ಸೃಷ್ಟಿಸಿದೆ ಎಂಬುದನ್ನು ತಿಳಿಸಲು ಸಂತೋಷವೆನಿಸುತ್ತದೆ.
ತಾವು ಈ ನೂತನ ಜವಾಬ್ದಾರಿಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ (ಕಾವಲುಪಡೆ) ಇನ್ನಷ್ಟು ಸಕ್ರಿಯವಾದ ಹೊಸ-ಹೊಸ ಕಾರ್ಯಕ್ರಮಗಳನ್ನು ಪ್ರಯತ್ನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತೀರಿ ಎಂಬ ವಿಶ್ವಾಸ ನಮ್ಮದು, ತಮ್ಮಿಂದ ಇನ್ನೂ ಹೆಚ್ಚಿನ ಸಹಕಾರ ಬಯಸುತ್ತೇವೆ ಎಂದು ಜಿಲ್ಲಾಧ್ಯಕ್ಷರಾದ ಶ್ರೀ ಅವಿನಾಶ ಬುಧರಕರ್ ರವರು ತಿಳಿಸಿರುತ್ತಾರೆ.
ವರದಿ: ಶ್ರೀನಿವಾಸ ಬಿರಾದಾರ



















