ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ಕರ್ನಾಟಕ ಕ್ಷತ್ರಿಯ ಪರಿಷತ್ತಿನಿಂದ ಛತ್ರಪತಿ ಶಿವಾಜಿ ಮಹಾರಾಜ ಭಾವಚಿತ್ರ ಮೆರವಣಿಗೆ

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿ ಕರ್ನಾಟಕ ಕ್ಷತ್ರಿಯ ಪರಿಷತ್ ಕಂಪ್ಲಿ ತಾಲ್ಲೂಕು ಘಟಕದಿಂದ ಹಿಂದೂ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರದ ಮೆರವಣಿಗೆ ಅದ್ದೂರಿಯಿಂದ ಜರುಗಿತು.
ಕಂಪ್ಲಿ ಕೋಟೆಯ ಶ್ರೀ ಪಂಪಾಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ ನಂತರ ಅಲಂಕೃತ ವಾಹನದಲ್ಲಿ ಬೃಹತ್ ಶಿವಾಜಿ ಮಹಾರಾಜರ ಭಾವಚಿತ್ರವನ್ನು ಪ್ರತಿಷ್ಠಾಪಿಸಿ ಪೂಜೆಯನ್ನು ಸಲ್ಲಿಸಿದ ನಂತರ ಬೃಹತ್ ಮೆರವಣಿಗೆಯನ್ನು ಆರಂಭಿಸಿದರು.

ಅದ್ದೂರಿ ಮೆರವಣಿಗೆಯು ಕೋಟೆಯ ಪ್ರಮುಖ ಬೀದಿಯಲ್ಲಿ ಮತ್ತು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಯುವಕರ ಹಿಂದೂ ಪರ, ಶಿವಾಜಿಯ ಘೋಷಣೆಗಳನ್ನು ಕೂಗುತ್ತಾ ವಿಜೃಂಭಣೆಯಿಂದ ಮೆರವಣಿಗೆಯನ್ನು ನಡೆಸಿ ಐತಿಹಾಸಿಕ ಸೋಮಪ್ಪನ ದೇವಸ್ಥಾನದ ಆವರಣದಲ್ಲಿ ಸಮಾರೋಪಗೊಂಡಿತು.
ಅದ್ದೂರಿ ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು ಪ್ರದರ್ಶನ ನೀಡುವ ಮೂಲಕ ಮೆರವಣಿಗೆಗೆ ವಿಶೇಷ ಮೆರಗನ್ನು ನೀಡಿದ್ದವು. ಮೆರವಣಿಗೆಯಲ್ಲಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಪದಾಧಿಕಾರಿಗಳಾದ ಆರೇರ ಗಣೇಶ್, ಪತ್ರಯ್ಯ್ ಸ್ವಾಮಿ, ಸುನೀಲ್ ರಾವು, ರಮೇಶ್ ಶಿಂಧೆ, ಶ್ರೀನಿವಾಸ, ಸುಭಾಷ್ ಹಾಗೂ ಪಟ್ಟಣದ ವಿವಿಧ ಹಿಂದೂ ಪರ ಸಂಘಟನೆಗಳ ಮುಖಂಡರು ಸೇರಿದಂತೆ ನೂರಾರು ಯುವಕರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!